Advertisement

Egg: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಆರಂಭ- ಮಕ್ಕಳೊಂದಿಗೆ ಊಟ ಮಾಡಿದ ಸಚಿವದ್ವಯರು

09:37 PM Aug 18, 2023 | Team Udayavani |

ಮಂಡ್ಯ: ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಎಲ್ಲ ಮಕ್ಕಳಿಗೂ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುವ ರಾಜ್ಯ ಸರ್ಕಾರದ ಮಹತ್ವದ ಯೋಜನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಶುಕ್ರವಾರ ಚಾಲನೆ ನೀಡಿದರು.

Advertisement

ನಗರದ ಹೊಸಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಚಿದ್ವಯರು, ಮಧ್ಯಾಹ್ನದ ಊಟವನ್ನು ಮಕ್ಕಳೊಂದಿಗೆ ಸವಿಯುತ್ತಾ, ವಿದ್ಯಾರ್ಥಿಗಳಿಗೆ ಮೊಟ್ಟೆ ತಿನ್ನಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು, ಕಾಂಗ್ರೆಸ್‌ ಗ್ಯಾರಂಟಿಗಳಿಂದ ಬಡವರಿಗೆ ಅನುಕೂಲವಾಗುತ್ತಿದೆ. ಈ ಹಿಂದೆ 8ನೇ ತರಗತಿ ಮಕ್ಕಳಿಗೆ ಮಾತ್ರ ಮೊಟ್ಟೆ ನೀಡಲಾಗುತ್ತಿತ್ತು. ಎಲ್ಲರಿಗೂ ಮೊಟ್ಟೆ ಕೊಡುವ ಕಾರ್ಯಕ್ರಮ ಕೇಳಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲ ಎನ್ನಲಿಲ್ಲ. ರಾಜ್ಯದ 60 ಲಕ್ಷ ಮಕ್ಕಳಿಗೆ ಮೊಟ್ಟೆ ಕೊಡಲಿದ್ದೇವೆ. 1.20 ಕೋಟಿ ಮೊಟ್ಟೆಯನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಮಾತನಾಡಿ, ಇದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡುವ ಯೋಜನೆಯಾಗಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಿಂದಿನ ಪ್ರಮಾಣವನ್ನೂ ಹೆಚ್ಚು ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next