Advertisement

ಕರಾವಳಿಯೆಲ್ಲೆಡೆ ಮುಸ್ಲಿಂ ಬಾಂಧವರಿಂದ ಸರಳವಾಗಿ ಈದುಲ್‌ ಫಿತ್ರ ಆಚರಣೆ

01:54 PM May 24, 2020 | sudhir |

ಮಂಗಳೂರು/ಉಡುಪಿ: ಕೋವಿಡ್ ಮಹಾಮಾರಿಯಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಬಾಂಧವರು ರವಿವಾರ ಈದುಲ್‌ ಫಿತ್ರ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಿದರು.

Advertisement

ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲು ಧರ್ಮ ಗುರುಗಳು ಕರೆ ನೀಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ಮಾಡುವ ಮೂಲಕ ಸರಳವಾಗಿ ಆಚರಣೆ ಮಾಡಿದರು.

ಎಲ್ಲ ಹಬ್ಬಗಳಂತೆ ಈದುಲ್‌ ಫಿತ್ರ ಕೂಡ ತರಹೇವಾರಿ ಖರೀದಿ, ಶುಭಾಶಯ ವಿನಿಮಯ ಇತ್ಯಾದಿಗಳ ಮೂಲಕ ಆರ್ಥಿಕ ಚಟುವಟಿಕೆ ಮತ್ತು ಸಾಮುದಾಯಿಕ ಚಲನಶೀಲತೆಗೆ ದೊಡ್ಡ ಮಟ್ಟದ ಕೊಡುಗೆ ನೀಡುವಂಥದ್ದು. ಆದರೆ ಈ ವರ್ಷ ಕೋವಿಡ್ ಹಾವಳಿ ಪವಿತ್ರ ರಮ್ಜಾನ್‌ ಹಬ್ಬದ ಪೂರ್ಣ ಸಡಗರದ ಆಚರಣೆಗೆ ಅಡ್ಡಿ ಮಾಡಿದೆ.

ಲಾಕ್‌ಡೌನ್‌ ಕಾರಣ ಬಟ್ಟೆ ಬರೆ ಖರೀದಿಯಿಂದಲೂ ಮುಸ್ಲಿಂ ಬಾಂಧವರು ದೂರ ಉಳಿದು ಸರಳ ರೀತಿಯಲ್ಲಿ ಹಬ್ಬ ಆಚರಿಸಿಕೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next