Advertisement

ದ.ಕ.ಜಿಲ್ಲೆ ಮಂಗಳವಾರ ಈದ್‌ ರಜೆ: ಸಚಿವ ಯು.ಟಿ. ಖಾದರ್‌

04:40 AM Nov 19, 2018 | Team Udayavani |

ಮಂಗಳೂರು: ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನ ಮಿಲಾದುನ್ನಬಿ ಆಚರಣೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ. 20ರಂದು ನಡೆಯಲಿರುವುದರಿಂದ ಅಂದು ಜಿಲ್ಲೆಯಲ್ಲಿ ಸರಕಾರಿ ರಜೆ ಘೋಷಿಸಲಾಗುವುದು ಎಂದು ನಗರಾಭಿವೃದ್ಧಿ ಖಾತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

Advertisement

ಈದ್‌ ಮಿಲಾದ್‌ ಸರಕಾರಿ ರಜೆ ನ. 21ರಂದು ನಿಗದಿಯಾಗಿದ್ದರೂ ದ.ಕ. ಜಿಲ್ಲೆಯಲ್ಲಿ ನ. 20ರಂದು ಈದ್‌ ಮಿಲಾದ್‌ ಆಚರಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಸರಕಾರಿ ರಜೆಯನ್ನು ಬದಲಾಯಿಸಿ ನ. 20ರಂದು ಶಾಲಾ ಕಾಲೇಜುಗಳಿಗೆ, ಸರಕಾರಿ ಕಚೇರಿಗಳಿಗೆ ರಜಾದಿನವಾಗಿ ಪರಿಗಣಿಸಲು ಹಾಗೂ ನ. 21ರಂದು ಎಂದಿನಂತೆ ಕಾರ್ಯನಿರ್ವಹಿಸಲು ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರು ಮುಖ್ಯಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ. ಸೋಮವಾರ ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದು ಸಚಿವ ಖಾದರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯೂ ಮಂಗಳವಾರವೇ ರಜೆ ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆಯಾದರೂ ರವಿವಾರ ತನಕ ಸರಕಾರದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಪತ್ರಿಕೆಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next