Advertisement

ಈದ್ಗಾ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಗದ್ವಾಲ್ ಕಾಶಿಂ ಸಾಬ್ ರಾಜೀನಾಮೆ

06:51 PM Jul 02, 2023 | sudhir |

ಗಂಗಾವತಿ: ನಗರದ ಈದ್ಗಾ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಗದ್ವಾಲ್ ಕಾಶಿಂಸಾಬ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಅಧ್ಯಕ್ಷರು ಹಾಗೂ ವಕ್ಫ್ ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಲಾಗಿದ್ದು ಕಳೆದ ೯ ವರ್ಷಗಳಿಂದ ಅಧ್ಯಕ್ಷನಾಗಿ ಹಲವು ಅಭಿವೃದ್ಧಿ ಕಾರ್ಯ ಮಾಡಿದ್ದು ಇಡೀ ಮುಸ್ಲಿಂ ಸಮಾಜ ಹಾಗೂ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರ ಸಹಕಾರದಲ್ಲಿ ಈದ್ಗಾ ಮೈದಾನವನ್ನು ಅಭಿವೃದ್ಧಿ ಮಾಡಿ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಇದೀಗ ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆ ಸಲ್ಲಿಸುತ್ತಿದ್ದು ಸ್ವೀಕರಿಸುವಂತೆ ಮನವಿ ಮಾಡಿದ್ದಾರೆ.

Advertisement

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಗೂ ಮುಂಚೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರ ಭಾಷಣ ಮತ್ತು ಶಾಸಕ ಗಾಲಿ ಜನಾರ್ದನರೆಡ್ಡಿಯವರನ್ನು ಸ್ವಾಗತ ಮಾಡದೇ ಇರುವುದಕ್ಕೆ ಮುಸ್ಲಿಂ ಸಮಾಜ ಹಾಗೂ ಶಾಸಕರ ಆಪ್ತರು ಈದ್ಗಾ ಕಮೀಟಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಈದ್ಗಾ ಕಮೀಟಿ ಅಧ್ಯಕ್ಷ ರಾಜೀನಾಮೆ ಘಟನೆಗಳಿಗೆ ಪುಷ್ಠಿ ನೀಡುವಂತಿದೆ.

ಯಾರ ಒತ್ತಡಕ್ಕೂ ಮಣಿದಿಲ್ಲ; ಈದ್ಗಾ ಕಮೀಟಿ ಅಧ್ಯಕ್ಷನಾಗಿ ಕಳೆದ 9 ವರ್ಷಗಳಿಂದ ಎಲ್ಲರ ಸಹಕಾರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆ ಸಲ್ಲಿಸಿದ್ದು ಯಾರ ಒತ್ತಡಕ್ಕೂ ಮಣಿದಿಲ್ಲ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಸಕರ ಸಂದೇಶವನ್ನು ನಮಾಜ್ ಮಾಡಿಸುವ ಗುರುಗಳು ಓದಿದ್ದಾರೆ. ಅವರಿಗೆ ಎಲ್ಲಿಯೂ ಅವಮಾನ ಮಾಡಿಲ್ಲ ಎಂದು ಈದ್ಗಾ ಕಮೀಟಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಗದ್ವಾಲ್ ಕಾಶಿಂಸಾಬ ಉದಯವಾಣಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಜು.3 ರಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತ ಆರಂಭ

Advertisement

Udayavani is now on Telegram. Click here to join our channel and stay updated with the latest news.

Next