Advertisement

ಹಳಿ ತಪ್ಪಿದ ಮಹಾಕೌಶಲ್‌ ಎಕ್ಸ್‌ಪ್ರೆಸ್‌ ರೈಲು:22 ಪ್ರಯಾಣಿಕರಿಗೆ ಗಾಯ

08:43 AM Mar 30, 2017 | Team Udayavani |

ಹೊಸದಿಲ್ಲಿ: ಉತ್ತರ ಪ್ರದೇಶದ ಮಹೋಬಾದ  ಕುಲಾಪಹರ್‌ ಎಂಬಲ್ಲಿ ಮಹಾಕೌಶಲ್‌ ಎಕ್ಸ್‌ಪ್ರೆಸ್‌ ರೈಲು ಗುರುವಾರ ನಸುಕಿನ 2.07 ರ ವೇಳೆ ಹಳಿ ತಪ್ಪಿದ್ದು, ಅವಘಡದಲ್ಲಿ 22  ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ. 

Advertisement

ರೈಲಿನ ಎಸಿ ಬೋಗಿ ಗಳು ಸೇರಿ 8 ಬೋಗಿಗಳು ಹಳಿ ತಪ್ಪಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. 

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ರಾಜ್ಯ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್‌ ಸಿಂಗ್‌ ಅವರಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಹೇಳಿದ್ದಾರೆ. ರೈಲ್ವೇ ಅಧಿಕಾರಿಗಳು, ಜಿಲ್ಲಾ ಮ್ಯಾಜಿಸ್ಟ್ರೇಟ್‌ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next