Advertisement

ಪರಮೇಶ್ವರ್‌ ವಿರುದ್ಧ ಹಿರಿಯರ ಅಸಮಾಧಾನ

06:05 AM Jun 05, 2018 | Team Udayavani |

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ವಿರುದ್ಧ ಪಕ್ಷದ ಹಿರಿಯ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾದ ಮೇಲೆ ಪರಮೇಶ್ವರ್‌ ಪಕ್ಷದ ಯಾವುದೇ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಂಗಿಯಾಗಿ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಕೆಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಿರಿಯರು ಸಂಪುಟ ಸೇರುವ ಬಗ್ಗೆಯೂ ಪರಮೇಶ್ವರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಪರಮೇಶ್ವರ್‌ ಅವರ ಏಕ ಪಕ್ಷೀಯ ನಿರ್ಧಾರದಿಂದ ಬೇಸರಗೊಂಡು ಎಸ್‌.ಆರ್‌. ಪಾಟೀಲ್‌ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಅಧಿಕಾರದಲ್ಲಿದ್ದ ಪಕ್ಷ ಸೋತ ನಂತರ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿ ಹೊತ್ತುಕೊಂಡು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಬದಲು ಅದೇ ಹುದ್ದೆಯಲ್ಲಿ ಮುಂದುವರೆದಿದ್ದು, ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ.  ಎರಡು ಬಾರಿ ಸಚಿವರಾದವರು ಮಂತ್ರಿಯಾಗಬಾರದು ಎಂಬ ಸೂತ್ರ ಪರಮೇಶ್ವರ್‌ ಅವರಿಗೆ ಅನ್ವಯವಾಗಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next