Advertisement

BJP ಯಿಂದ ಹಿರಿಯರ ಕಡೆಗಣನೆ: ಎನ್‌.ವೈ. ಗೋಪಾಲಕೃಷ್ಣ

11:16 PM Apr 16, 2023 | Team Udayavani |

ನಾಯಕನಹಟ್ಟಿ: ಜಗದೀಶ ಶೆಟ್ಟರ್‌, ಲಕ್ಷ್ಮಣ ಸವದಿ, ಕೆ.ಎಸ್‌. ಈಶ್ವರಪ್ಪ ಅವರಂತಹ ಹಿರಿಯ ನಾಯಕರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಅವರ ಸೇವೆಯನ್ನು ಗುರುತಿಸಿ ಗೌರವಿಸಲಿಲ್ಲ. ನಾನು ಮಾತ್ರ ಎಲ್ಲರಿಗಿಂತ ಮುಂಚಿತವಾಗಿ ಬಿಜೆಪಿ ತೊರೆದು ಕ್ಷೇತ್ರದ ಅಭಿವೃದ್ಧಿಗಾಗಿ ಮಾತೃಪಕ್ಷಕ್ಕೆ ಬಂದಿದ್ದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎನ್‌.ವೈ. ಗೋಪಾಲಕೃಷ್ಣ ಹೇಳಿದರು.
ನಗರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಘೋಷಣೆಗೆ ಮುನ್ನವೇ 8ರಿಂದ 9 ಶಾಸಕರು ಬಿಜೆಪಿ ಬಿಡಲು ಸಿದ್ಧರಿದ್ದರು. ನನ್ನೊಂದಿಗೆ ಇನ್ನೂ ಹಲವರಿಗೆ ಪಕ್ಷ ಬಿಡದಂತೆ ಹಲವಾರು ಅಮಿಷಗಳನ್ನು ಒಡ್ಡಲಾಯಿತು. ಕ್ಷೇತ್ರದ ಅಭಿವೃದ್ಧಿಗೆ ಕೋಟಿಗಟ್ಟಲೆ ಹಣ ನೀಡುವುದಾಗಿ ತಿಳಿಸಲಾಗಿತ್ತು. ಬಿಜೆಪಿ ಸಿದ್ಧಾಂತಗಳು ನನಗೆ ಒಪ್ಪಿಗೆಯಾಗಲಿಲ್ಲ. ಅಲ್ಲದೆ ನನ್ನ ಮಾನಸಿಕ ಸ್ಥಿತಿ ಬಿಜೆಪಿಯೊಂದಿಗೆ ಹೊಂದಾಣಿಕೆಯಾಗಲಿಲ್ಲ. ಉಳಿದ ಏಳು ಶಾಸಕರು ಕಾಂಗ್ರೆಸ್‌ ಸೇರುವ ನಿರ್ಧಾರದಿಂದ ಹಿಂದೆ ಸರಿದರು ಎಂದರು

Advertisement
Advertisement

Udayavani is now on Telegram. Click here to join our channel and stay updated with the latest news.

Next