Advertisement

ಫಲಿತಾಂಶಕ್ಕೂ ಮುನ್ನ ಲೆಕ್ಕಚಾರ! ಚಂದ್ರಬಾಬು ನಾಯ್ಡು, ರಾಹುಲ್ ಗಾಂಧಿ ಭೇಟಿ, ಚರ್ಚೆ

09:41 AM May 20, 2019 | Nagendra Trasi |

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ಒಂದು ವೇಳೆ ಮಹಾಘಟ ಬಂಧನ್ ಗೆ ಹೆಚ್ಚು ಸ್ಥಾನ ಬಂದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ದೂರ ಇಟ್ಟು, ಬಿಜೆಪಿಯೇತರ ಸರ್ಕಾರ ರಚಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶನಿವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಏತನ್ಮಧ್ಯೆ ದೆಹಲಿಯಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರನ್ನೂ ಭೇಟಿಯಾಗಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಬಿಜೆಪಿಗೆ ಬಹುಮತ ದೊರೆಯದಿದ್ದ ವೇಳೆ ವಿಪಕ್ಷಗಳು ಮೇ 23ರ ನಂತರ ಜೊತೆಗೂಡಿ ಬಿಜೆಪಿಯೇತರ ಸರ್ಕಾರ ರಚಿಸಲು ತೆಲುಗುದೇಶಂ ಪಕ್ಷದ ವರಿಷ್ಠ ಚಂದ್ರಬಾಬು ನಾಯ್ಡು ಸಿದ್ಧತೆ ರೂಪಿಸುತ್ತಿದ್ದಾರೆ ಎಂದು ವರದಿ ವಿವರಿಸಿದೆ. ಏತನ್ಮಧ್ಯೆ ನಾಯ್ಡು ಅವರನ್ನು ಸಂಜೆ ಲಕ್ನೋದಲ್ಲಿ ಉತ್ತರಪ್ರದೇಶದ ಮೈತ್ರಿ ಪಕ್ಷವಾಗಿರುವ ಮಾಯಾವತಿ ಹಾಗೂ ಅಖಿಲೇಶ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next