Advertisement

Election 2023: ಉಡುಪಿ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

12:23 AM Apr 07, 2023 | Team Udayavani |

ಉಡುಪಿ: ಎರಡನೇ ಪಟ್ಟಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆಯಾಗುತ್ತಿದ್ದಂತೆ ಉಳಿದ ಆಕಾಂಕ್ಷಿಗಳು ಅಸಮಾಧಾನ ಹೊರಹಾಕಿದ್ದಾರೆ. ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ ಅವರು ಬೆಂಬಲಿಗರ ಸಭೆ ನಡೆಸಿ, ಆಸ್ಕರ್‌ ಫೆರ್ನಾಂಡಿಸ್‌ ಅವರು ಇದ್ದಿದ್ದರೆ ಖಂಡಿತವಾಗಿಯೂ ಹೀಗಾಗುತ್ತಿರಲಿಲ್ಲ. ಹಾಗಾಗಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಹಾಗೂ ಹುದ್ದೆಗೆ ರಾಜೀನಾಮೆ ನೀಡಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದರು.

Advertisement

ಜಿಲ್ಲಾಧ್ಯಕ್ಷರು, ಬ್ಲಾಕ್‌ ಅಧ್ಯಕ್ಷರು ಸಹಿತ ಟಿಕೆಟ್‌ಗಾಗಿ ಕ್ಷೇತ್ರದಿಂದ 8 ಮಂದಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕಮಾಂಡ್‌ ಅಭ್ಯರ್ಥಿ ಹೆಸರು ಅಂತಿಮಗೊಳಿಸು ವಾಗ ಯಾರ ಅಭಿಪ್ರಾಯವನ್ನೂ ಕೇಳಲಿಲ್ಲ ಎಂದು ಉಳಿದ ಆಕಾಂಕ್ಷಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಪ್ರಮುಖ ರಾದ ರಮೇಶ್‌ ಕಾಂಚನ್‌, ಕೃಷ್ಣಮೂರ್ತಿ ಆಚಾರ್ಯ, ಪ್ರಖ್ಯಾತ್‌ ಶೆಟ್ಟಿ ಮತ್ತಿತರರು ಆಕಾಂಕ್ಷಿಗಳಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next