Advertisement

Election 2023: ಮುಖ್ಯಮಂತ್ರಿ ಪ್ರವಾಸಕ್ಕೆ ವಿಶೇಷ ವಾಹನ

10:21 PM Apr 22, 2023 | Team Udayavani |

ಬೆಂಗಳೂರು: ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ರವಿವಾರದಿಂದ ತಮ್ಮ ಪ್ರವಾಸ ಪ್ರಾರಂಭಿಸಲಿದ್ದು, ಇದಕ್ಕಾಗಿ ವಿಶೇಷ ವಾಹನವೊಂದನ್ನು ಸಿದ್ಧಪಡಿಸಲಾಗಿದೆ.

Advertisement

ಎ. 24ರಂದು ದಾವಣಗೆರೆಯ ಹರಿಹರ, ರಾಣೆಬೆನ್ನೂರು, ಹಾವೇರಿ, ಬಂಕಾಪುರ, ಸವಣೂರು, ಶಿಗ್ಗಾವಿ, ಕುಂದಗೋಳದಲ್ಲಿ ಪ್ರಚಾರ ನಡೆಸಿ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಎ. 25ರಂದು ಹುಬ್ಬಳ್ಳಿ, ಕಿತ್ತೂರು, ಖಾನಾಪುರ, ಬೆಳಗಾವಿ ಗ್ರಾಮೀಣ, ಬೆಳಗಾವಿ ದಕ್ಷಿಣ, ಉತ್ತರ, ಬೈಲಹೊಂಗಲ, ಸವದತ್ತಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವರು.

ಎ. 26ರಂದು ಯಮಕನಮರಡಿ, ಚಿಕ್ಕೋಡಿ, ನಿಪ್ಪಾಣಿ, ಅರಬಾವಿ, ಗೋಕಾಕ, ಅಥಣಿ, ರಾಯಭಾಗ, ರಾಮದುರ್ಗ. ಎ. 27ರಂದು ಶಿಗ್ಗಾವಿಯಲ್ಲಿ ಪ್ರಚಾರ ನಡೆಸಿ ಬೆಂಗಳೂರಿಗೆ ಮರಳುವರು.

Advertisement

Udayavani is now on Telegram. Click here to join our channel and stay updated with the latest news.

Next