Advertisement

ಚುನಾವಣೆ ಹಿನ್ನೆಲೆ: ಮಡಿಕೇರಿಯಲ್ಲಿ ಇಬ್ಬರು ಆರೋಪಿಗಳ ಗಡಿಪಾರು

01:00 AM Apr 15, 2023 | Team Udayavani |

ಮಡಿಕೇರಿ: ಅಪರಾಧ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಿಲ್ಲೆಯ ಇಬ್ಬರನ್ನು ಪೊಲೀಸ್‌ ಇಲಾಖೆ ಗಡಿಪಾರು ಮಾಡಿದೆ.
ಚುನಾವಣೆ ಹಿನ್ನೆಲೆಯಲ್ಲಿ ರೌಡಿ ಲಿಸ್ಟ್‌ ನಲ್ಲಿರುವ ಆರೋಪಿಗಳನ್ನು ಬೇರೆಡೆಗೆ ಗಡಿಪಾರು ಮಾಡಲಾಗುತ್ತಿದ್ದು, ಮಡಿಕೇರಿ ನಿವಾಸಿಗಳಾದ ಲೋಕೇಶ್‌ ಹಾಗೂ ಸುಜಿತ್‌ ಎಂಬಿಬ್ಬರನ್ನು ಗಡಿಪಾರು ಮಾಡಲಾಗಿದೆ.

Advertisement

ಈ ಹಿಂದೆ ಗುಂಡು ಹಾರಿಸಿ ವ್ಯಕ್ತಿಗಳನ್ನು ಹತ್ಯೆ ಮಾಡಲು ಯತ್ನಿಸಿದ್ದ ಪ್ರಕರಣ ಸೇರಿದಂತೆ ಲೋಕೇಶ್‌ ಮೇಲೆ ಆರು ಪ್ರಕರಣ ಹಾಗೂ ಸುಜಿತ್‌ ಮೇಲೆ ಐದು ಪ್ರಕರಣಗಳಿದ್ದು, ಈ ಹಿನ್ನೆಲೆಯಲ್ಲಿ ಲೋಕೇಶ್‌ನನ್ನು ಉಡುಪಿ ಜಿಲ್ಲೆಗೆ ಹಾಗೂ ಸುಜಿತ್‌ನನ್ನು ಚಾಮರಾಜನಗರಕ್ಕೆ ಮೂರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಮಡಿಕೇರಿ ನಗರ ಪೊಲೀಸ್‌ ಠಾಣಾಧಿಕಾರಿ ಶ್ರೀನಿವಾಸ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next