Advertisement

ಚುನಾವಣೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಪಾಸಣೆ ಬಿಗಿ

11:09 PM Mar 19, 2023 | Team Udayavani |

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯುವುದಕ್ಕಾಗಿ ಹಾಗೂ ಇತರ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿ ಸಹಿತ ದ.ಕ. ಜಿಲ್ಲೆಯಾದ್ಯಂತ ಪೊಲೀಸರು ತಪಾಸಣೆ ಬಿಗಿಗೊಳಿಸಿದ್ದಾರೆ.

Advertisement

ದ.ಕ. ಜಿಲ್ಲಾ ಪೊಲೀಸರು ಚುನಾವಣೆಗೆ ಸಂಬಂಧಿಸಿ ಸೂಕ್ಷ್ಮ ಸ್ಥಳಗಳಲ್ಲಿ ಸಂಬಂಧಿಸಿದ ಪೊಲೀಸ್‌ ಅಧಿಕಾರಿ, ಸಿಬಂದಿಯ ಸಭೆ ನಡೆಸಿ ಸೂಚನೆಗಳನ್ನು ನೀಡಿದ್ದಾರೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಗೆ ಹೊಂದಿಕೊಂಡಿರುವ ಅಂತರ್‌ಜಿಲ್ಲಾ, ಅಂತರ್‌ರಾಜ್ಯ ಗಡಿಗಳಲ್ಲಿಯೂ ವಾಹನಗಳ ತಪಾಸಣೆ ಬಿಗಿಗೊಳಿಸಲಾಗಿದೆ.

ದಿಢೀರ್‌ ತಪಾಸಣೆ
ಮಂಗಳೂರು ನಗರದಲ್ಲಿರುವ 11 ಚೆಕ್‌ಪೋಸ್ಟ್‌ಗಳಲ್ಲಿ ನಿರಂತರವಾಗಿ ತಪಾಸಣೆ ನಡೆಯುತ್ತಿದೆ. ಅಲ್ಲದೆ ಕನಿಷ್ಠ 6 ಕಡೆಗಳಲ್ಲಿ ದಿಢೀರ್‌ ತಪಾಸಣೆ ನಡೆಸಲಾಗುತ್ತಿದೆ. 7 ಅಂತರ್‌ರಾಜ್ಯ ಚೆಕ್‌ಪೋಸ್ಟ್‌ಗಳಿದ್ದು, ಅಲ್ಲಿಯೂ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

98 ಸಿಸಿ ಕೆಮರಾಗಳು ಕಾರ್ಯಾರಂಭ
ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್‌ ವತಿಯಿಂದ 98 ಸಿಸಿಟಿವಿ ಕೆಮರಾಗಳನ್ನು ಅಳವಡಿಸಲಾಗಿದ್ದು, ಇವುಗಳು ಕಾರ್ಯಾರಂಭ ಮಾಡಿವೆ. ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆ, ಸಂಚಾರ ನಿಯಂತ್ರಣಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next