Advertisement

Election ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

08:49 PM Apr 27, 2023 | Team Udayavani |

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟೂರು, ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗುರುವಾರ ಗಲಾಟೆ ನಡೆದಿದೆ. ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ತೀವ್ರ ಪೆಟ್ಟಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ ಎಂದು ವರದಿಯಾಗಿದೆ.

Advertisement

ಗಾಯಾಳು ಯುವಕ ಕೆ.ಎಂ.ನಾಗೇಶ್ ಎನ್ನುವವನಾಗಿದ್ದು, ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆ ಪ್ರಚಾರ ಕಾರ್ಯದಲ್ಲಿ ಇದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯನ ಹುಂಡಿಯಲ್ಲಿ ವಿ.ಸೋಮಣ್ಣನವರ ಪರ ಪ್ರಚಾರದ ವೇಳೆ ಕಾಂಗ್ರೆಸ್ ನ ಗೂಂಡಾಗಳು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಆದರೂ ಸಿದ್ದರಾಮಯ್ಯ ಹುಂಡಿಯಲ್ಲಿ ನೂರಾರು ಜನ ವಿ. ಸೋಮಣ್ಣನವರನ್ನು ಸ್ವಾಗತಿಸಿ ಊರಿನ ಎಲ್ಲಾ ರಸ್ತೆಗಳಲ್ಲಿ ಮೆರವಣಿಗೆಯನ್ನು ನಡೆಸಿದ್ದಾರೆ ಎಂದು ಸಿದ್ದರಾಮನಹುಂಡಿಯಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next