Advertisement

ಪ್ರೊ|ಸಂಕನೂರಗೆ ಮತ ನೀಡಿ ಗೆಲ್ಲಿಸಿ

01:42 PM Oct 24, 2020 | Suhan S |

ಹಾನಗಲ್ಲ: ಪದವೀಧರರಿಗೆ ನೌಕರಿ ಸಿಗಲಿ ಎನ್ನುವ ವಿಶಿಷ್ಟ ಹೋರಾಟಗಳ ಮೂಲಕ ಪದವೀಧರರ ಹಾಗೂ ನೌಕರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿರುವ ಪ್ರೊ| ಎಸ್‌.ವಿ.ಸಂಕನೂರ ಅವರಿಗೆ ಪ್ರಥಮ ಪ್ರಾಶಸ್ತÂದ ಮತ ನೀಡಿ ವಿಧಾನ ಪರಿಷತ್ತಿಗೆ ಮರು ಆಯ್ಕೆ ಮಾಡುವಂತೆ ಸಂಸದ ಶಿವಕುಮಾರ ಉದಾಸಿ ಮನವಿ ಮಾಡಿದರು.

Advertisement

ಪಟ್ಟಣದ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಶುಕ್ರವಾರ ಭೇಟಿ ನೀಡಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ವಿ.ಸಂಕನೂರ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು. ವಿದ್ಯಾಲಯದ ಬಿ.ಇಡಿವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಜೊತೆ ಮಾತನಾಡಿದ ಅವರು, ಸಂಕನೂರ ಸಜ್ಜನಿಕೆಯ ರಾಜಕಾರಣಿ. ಒಂದು ಅವಧಿಗೆ ವಿಧಾನ ಪರಿಷತ್‌ ಸದಸ್ಯರಾಗಿ ಉತ್ತಮ ಸೇವೆ ಮಾಡಿದ್ದಾರೆ. ದೇಶದಲ್ಲಿ ಕಸ್ತೂರಿ ರಂಗನ್‌ ನೇತೃತ್ವದಲ್ಲಿ 3 ನೇ ಬಾರಿಗೆ ಶಿಕ್ಷಣ ನೀತಿ ಬದಲಾವಣೆಯಾಗಿದೆ. ಕೇಂದ್ರದ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರದ ಹಿಂದಿನ ಸವಾಲುಗಳನ್ನು ಸರಿದೂಗಿಸುವ ಬದ್ಧತೆ ಇದೆ. ಸಂಕನೂರ ಪರ ಮತ ನೀಡಿ ಬಿಜೆಪಿ ಆಡಳಿತಕ್ಕೆ ಬಲ ತುಂಬುವ ಮೂಲಕ ಅಮೂಲಾಗ್ರ ಬದಲಾವಣೆ ತರಲು ತಮ್ಮ ಮತವನ್ನು ಬಿಜೆಪಿ ಅಭ್ಯರ್ಥಿಗೆ ನೀಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಶಿವರಾಜ ಸಜ್ಜನರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧರಾಜ ಕಲಕೋಟಿ, ತಾಲೂಕು ಘಟಕದ ಅಧ್ಯಕ್ಷ ರಾಜು ಗೌಳಿ, ಮುಖಂಡರಾದ ಜಯತೀರ್ಥ ಕಟ್ಟಿ, ಬಿ.ಎಸ್‌. ಅಕ್ಕಿವಳ್ಳಿ, ಕಲ್ಯಾಣಕುಮಾರ ಶೆಟ್ಟರ, ಶಿವಲಿಂಗಪ್ಪ ತಲ್ಲೂರ, ರಾಜಣ್ಣ ಪಟ್ಟಣದ, ಭೋಜರಾಜ ಕರೂದಿ ಮೊದಲಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next