Advertisement

ಇಂದಿನಿಂದ ಚುನಾವಣಾ ಪ್ರಚಾರ: ದೇವೇಗೌಡ

03:23 PM Oct 18, 2021 | Shwetha M |

ಸಿಂದಗಿ: ಸಿಂದಗಿ ಉಪಚುನಾವಣೆ ನಿಮಿತ್ತ ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಅವರ ಪರ ಚುನಾವಣಾ ಪ್ರಚಾರ ಅ. 18ರಿಂದ ಪ್ರಾರಂಭಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

Advertisement

ರವಿವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ, ಕುಮಾರಸ್ವಾಮಿ ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ನನ್ನ ಅಭಿಪ್ರಾಯದಂತೆ ಈ ಕ್ಷೇತ್ರದಲ್ಲಿ ಕೆಲಸ ಮಾಡಿರುವುದನ್ನು ಗುರುತಿಸುವವರು ಸಾಕಷ್ಟು ಜನರಿದ್ದಾರೆ. ನಾವು ಚುನಾವಣೆ ಪ್ರಚಾರದಲ್ಲಿ ಯಾವ ಪಕ್ಷದ ಬಗ್ಗೆ ಮಾತನಾಡೋದಿಲ್ಲ. ನಮ್ಮ ಸಾಧನೆ ಬಗ್ಗೆ ಮಾತನಾಡಿ ಮತಯಾಚನೆ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿ, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರು ಜೆಡಿಎಸ್‌ ಪಕ್ಷದವರೆಂದು ಹೇಗೆ ಹೇಳುವುದು. ಯಾರು ಪಕ್ಷದಿಂದ ಬಿಟ್ಟು ಹೋಗುತ್ತಾರೋ ಎಂದು ನೋಡೋದಿಲ್ಲ. ನಾವು ಮತದಾರರ ಬಳಿ ನೇರವಾಗಿ ಹೋಗಿ ಮತಯಾಚನೆ ಮಾಡುತ್ತೇವೆ. ಚುನಾವಣೆ ಪ್ರಚಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಸೇರಿದಂತೆ ರಾಜ್ಯದ, ಜಿಲ್ಲೆಯ ಮುಖಂಡರು ಭಾಗವಹಿಸುವರು.ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ನಾಜಿಯಾ ಅಂಗಡಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಅಭ್ಯರ್ಥಿ ನಾಜಿಯಾ ಅಂಗಡಿ, ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯೆ ಮಂಗಳಾದೇವಿ ಬಿರಾದಾರ, ಎಂ.ಎಸ್‌. ಪಾಟೀಲ ಹಲಸಂಗಿ, ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ, ತಾಲೂಕು ಮಾಜಿ ಅಧ್ಯಕ್ಷ ಪ್ರಕಾಶ ಹಿರೇಕುರಬರ, ಜಿಪಂ ಮಾಜಿ ಸದಸ್ಯ ಗುರುರಾಜಗೌಡ ಪಾಟೀಲ ಚಾಂದಕವಠೆ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next