Advertisement

ಕೇಂದ್ರದಲ್ಲಿ ಅಧಿಕಾರಕ್ಕೇರಿದರೆ ಸಾಲ ಮನ್ನಾ: ರಾಹುಲ್‌

06:00 AM May 05, 2018 | Team Udayavani |

ಕಲಬುರಗಿ: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಗಳಿಸಿ ಸರ್ಕಾರ ರಚಿಸಿದರೆ ಎಲ್ಲ ಬ್ಯಾಂಕ್‌ಗಳಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಘೋಷಿಸಿದರು.

Advertisement

ಶುಕ್ರವಾರ ಕಾಳಗಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಸಹಕಾರಿ ಸಂಘಗಳಲ್ಲಿ ಸಾಲ ಮನ್ನಾ ಮಾಡಿದೆ. ಕೇಂದ್ರದಲ್ಲೂ ಕಾಂಗ್ರೆಸ್‌ ಸರ್ಕಾರ ಬಂದರೆ ಸರ್ಕಾರ ರಚನೆಯಾದ 10 ದಿನದೊಳಗೆ ಎಲ್ಲ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಲಾಗುವುದು. ಈ ಹಿಂದೆ ಡಾ. ಮನಮೋಹನ್‌ ಸರ್ಕಾರವಿದ್ದಾಗ 75 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಲಾಗಿತ್ತು. ಆದರೆ ಪ್ರಧಾನಿ ಮೋದಿ ರೈತರ ಬಗ್ಗೆ ಮಾತನಾಡುತ್ತಾರೆಯಾದರೂ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಒಂದೇ ಒಂದು ರೂ. ಸಾಲ ಮನ್ನಾ ಮಾಡಿಲ್ಲ. ನಾವು ನುಡಿದಂತೆ ನಡೆದು ಘೋಷಣೆಯನ್ನು ಈಡೇರಿಸುತ್ತೇವೆ ಎಂದರು.

ಬಸವಣ್ಣ ನುಡಿದಂತೆ ನಡೆ ಎಂದು ಹೇಳಿದ್ದಾರೆ. ಆದರೆ ಪ್ರಧಾನಿ ಮೋದಿ ಅವರಿಗೆ ಈ ನುಡಿ ಅರ್ಥವಾಗಿಲ್ಲ ಎಂಬುದು ಗೊತ್ತಾಗುತ್ತಿದೆ. ಏಕೆಂದರೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗುವುದು, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂಬುದಾಗಿ ಹೇಳಿ ಅದನ್ನು ಪಾಲನೆ ಮಾಡದಿರುವುದನ್ನು ನೋಡಿದರೆ ನುಡಿದಂತೆ ನಡೆದಿಲ್ಲ ಎಂಬುದು ಸ್ಪಷ್ಟ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next