Advertisement

ಅತ್ತ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದರೆ, ಇತ್ತ ಚುನಾವಣಾ ಅಭ್ಯರ್ಥಿ ನೇಣಿಗೆ ಶರಣು

04:10 PM Dec 22, 2020 | sudhir |

ಧಾರವಾಡ: ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ನಡೆಯುತ್ತಿದ್ದ ಸಮಯದಲ್ಲೇ ಅಭ್ಯರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.

Advertisement

ಗರಗ ಗ್ರಾಮದ 2ನೇ ವಾರ್ಡನ ಅಭ್ಯರ್ಥಿ‌ ದಾಮೋದರ ಯಲಿಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬುದು ಗೊತ್ತಾಗಿಲ್ಲವಾದರೂ, ಚುನಾವಣೆಯ ಕಾರಣದಿಂದಲೇ ಮಾನಸಿಕವಾಗಿ ಹೀಗೆ ಮಾಡಿಕೊಂಡಿದ್ದಾನೆಂದು ಹೇಳಲಾಗಿದೆ.

ಇಂದು ಬೆಳಿಗ್ಗೆ ಮತದಾನ ನಡೆಯುತ್ತಿದ್ದ ಸಮಯದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ದಾಮೋದರ ಯಲಿಗಾರ ವಿರುದ್ಧ ರಾಜು ಇಜಾರಿ ಎಂಬುವವರ ಸ್ಪರ್ಧೆ ಮಾಡಿದ್ದರು. ದಾಮೋದರ ಅ ವರ್ಗದಡಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಇದನ್ನೂ ಓದಿ:ಹರೇಕಳ: ಮತದಾನಕ್ಕೆ ಆಮಿಷ ಆರೋಪ, ಕಾಂಗ್ರೆಸ್- ಎಸ್ ಡಿಪಿಐ ಕಾರ್ಯಕರ್ತರ ಮಾತಿನ ಚಕಮಕಿ

ಘಟನೆಯ ಸುದ್ಧಿ ತಿಳಿಯುತ್ತಿದಂತೆ ಗ್ರಾಮಸ್ಥರು ಮನೆ ಮುಂದೆ ಜಮಾವಣೆಯಾಗಿದ್ದು, ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದಾಮೋದರ ಯಲಿಗಾರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿದ್ದ.

Advertisement
Advertisement

Udayavani is now on Telegram. Click here to join our channel and stay updated with the latest news.

Next