Advertisement

ಚುನಾವಣೆ ಕರ್ತವ್ಯಲೋಪ: ಅಧಿಕಾರಿಗಳ ಅಮಾನತು

11:14 PM Apr 20, 2019 | Team Udayavani |

ದಾವಣಗೆರೆ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ತೋರಿರುವ ಇಬ್ಬರು ಅಧಿಕಾರಿಗಳನ್ನು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ಅಮಾನತುಗೊಳಿಸಿದ್ದಾರೆ.

Advertisement

ದಾವಣಗೆರೆ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಆರ್‌. ಗಿರಡ್ಡಿ ಹಾಗೂ ಸಹಾಯಕ ಕಂದಾಯ ಅಧಿಕಾರಿ ವಿ. ಜಗನ್ನಾಥ್‌ರಾವ್‌ ಅಮಾನತುಗೊಂಡವರು.

ಏ.19 ರಂದು ಮಹಾನಗರ ಪಾಲಿಕೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಸಂದರ್ಭದಲ್ಲಿ, ಅಂಚೆ ಮತಪತ್ರ ಸಿಬ್ಬಂದಿ ಕಚೇರಿಯಲ್ಲಿ ಇಲ್ಲದಿರುವುದು ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಸುಮಾರು 923 ಇ.ಡಿ.ಸಿ ಅರ್ಜಿಗಳನ್ನು ಬಾಕಿ ಇರಿಸಿಕೊಂಡಿರುವುದು ಕಂಡು ಬಂತು.

ಜತೆಗೆ ಪೊಲೀಸ್‌ ಹಾಗೂ ವಾಹನ ಚಾಲಕರ ಸುಮಾರು 397 ಇ.ಡಿ.ಸಿ ಅರ್ಜಿಗಳು ನಾಪತ್ತೆ ಆಗಿರುವುದು ಕಂಡು ಬಂದಿತ್ತು. ಈ ಕುರಿತು ವಿಚಾರಿಸಿದಾಗ ಬೇಜವಾಬ್ದಾರಿ ಉತ್ತರ ನೀಡಿದ್ದರು. ಹಾಗಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next