Advertisement
ಸಭೆಯಲ್ಲಿ ಮುಖ್ಯವಾಗಿ ಪ್ರಚಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಲವು ವಿಷಯಗಳನ್ನು ಪ್ರಸ್ತಾವಿಸಿದರು. ಮುಖ್ಯವಾಗಿ ಮತಗಟ್ಟೆ ಮಟ್ಟದ ಪಕ್ಷದ ಏಜೆಂಟರ ಮೂಲಕ ಪ್ರಸ್ತುತ ನಡೆಯುತ್ತಿರುವ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವುದನ್ನು ಪರಿಶೀಲಿಸುವಂತೆ ಜಾಗೃತಿ ಮೂಡಿಸಲು ಸಹಕರಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.
Related Articles
Advertisement
ದಿವ್ಯಾಂಗರಿಗಾಗಿ ಸಕ್ಷಮ್ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು, ಅವರು ತಮಗೆ ಬೇಕಾದವಾಹನ ಅಥವಾ ಇತರ ಸೌಲಭ್ಯಗಳನ್ನು ಆ್ಯಪ್ ಮೂಲಕ ಕಾದಿರಿಸಬಹುದಾಗಿದೆ. ಚುನಾವಣೆ ಸಂಬಂಧಿತ ಯಾವುದೇ ಪ್ರಶ್ನೆಗಳಿಗಾಗಿ ಮತದಾರರ ಸಹಾಯವಾಣಿ 1950ಕ್ಕೆ ಉಚಿತವಾಗಿ ಕರೆ ಮಾಡುವ ಮೂಲಕ ಉತ್ತರ ಪಡೆದುಕೊಳ್ಳಬಹುದಾಗಿದೆ ಎಂದು ಮೀನಾ ಹೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪಕ್ಷಗಳ ಪ್ರತಿನಿದಿಗಳು ತಮ್ಮ ಸಲಹೆ, ಸೂಚನೆಗಳನ್ನು ನೀಡಿದರು. ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮಾ ರಾವ್ ಸಹಿತ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಅಭ್ಯರ್ಥಿಗಳಿಗಾಗಿ ಸುವಿಧಾ ಆ್ಯಪ್ ಚುನಾವಣ ಅವಧಿಯಲ್ಲಿ ಅಭ್ಯರ್ಥಿಗಳಿಗೆ ನಾಮನಿರ್ದೇಶನ ಮತ್ತು ಅನುಮತಿ ಪ್ರಕ್ರಿಯೆಗೆ ಸಹಾಯ ಮಾಡಲು ಆಯೋಗ ಸುವಿಧಾ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದೆ. ಈ ಅಪ್ಲಿಕೇಶನ್ ಆ್ಯಂಡ್ರಾಯಿಡ್ ವೇದಿಕೆಯಲ್ಲಿ ಲಭ್ಯವಿದೆ. ಸುವಿಧಾ ಅಭ್ಯರ್ಥಿ ಅಪ್ಲಿಕೇಶನ್ ಬಳಸಲು ಅಭ್ಯರ್ಥಿಗಳು ಖಾತೆಯನ್ನು ರಚಿಸಬೇಕು ಮತ್ತು ಅವರ ರುಜುವಾತುಗಳೊಂದಿಗೆ ಲಾಗ್ ಇನ್ ಮಾಡಬೇಕಾಗುತ್ತದೆ. ಒಮ್ಮೆ ಲಾಗಿನ್ ಆದ ಬಳಿಕ ಅಭ್ಯರ್ಥಿಗಳು ತಮ್ಮ ನಾಮನಿರ್ದೇಶನ ಮತ್ತು ಅನುಮತಿಯ ಸ್ಥಿತಿಯನ್ನು ವೀಕ್ಷಿಸಬಹುದು ಎಂದು ಮನೋಜ್ ಕುಮಾರ್ ಮೀನಾ ವಿವರಿಸಿದರು.