Advertisement

ಅವಹೇಳನಕಾರಿ ಹೇಳಿಕೆ: ಬಿಜೆಪಿಯ ಸಂಸದ, ಕಾಂಗ್ರೆಸ್‌ನ ಶಾಸಕಿಗೆ ಚುನಾವಣಾ ಆಯೋಗ ಎಚ್ಚರಿಕೆ

03:34 PM Apr 01, 2024 | Team Udayavani |

ನವದೆಹಲಿ: ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಸಂಸದ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್‌ ಶಾಸಕಿ ಸುಪ್ರಿಯಾ ಶ್ರಿನೇತಾ ಅವರಿಗೆ ಚುನಾವಣಾ ಆಯೋಗ ಸೋಮವಾರ ಎಚ್ಚರಿಕೆ ನೀಡಿದೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಚುನಾವಣಾ ಆಯೋಗ ಇವರಿಬ್ಬರು ಕೀಳು ಮಟ್ಟದ ವೈಯಕ್ತಿಕ ದಾಳಿ ನಡೆಸುವ ಮೂಲಕ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದೆ. ಅಲ್ಲದೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಹೇಳಿಕೆಗಳನ್ನು ನೀಡುವಾಗ ಜಾಗರೂಕರಾಗಿ ಇರುವಂತೆಯೂ ಹೇಳಿತ್ತು ಆದರೆ ಇಬ್ಬರೂ ಅದನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ ಚುನಾವಣಾ ಆಯೋಗ ಇಬ್ಬರಿಗೂ ನೊಟೀಸ್ ನೀಡಿ ಅವರಿಂದ ಉತ್ತರ ಸ್ವೀಕರಿಸಿದ ಬಳಿಕವೇ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿಯ ಸಂಸದ ದಿಲೀಪ್ ಘೋಷ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ಅವಹೇಳನಕಾರಿಯಾದ ಹೇಳಿಕೆಗಳನ್ನು ನೀಡಿದ್ದರು ಅದರಂತೆ ಕಾಂಗ್ರೆಸ್ ಶಾಸಕಿಯಾಗಿರುವ ಸುಪ್ರಿಯಾ ಶ್ರಿನೇತಾ ಅವರು ನಟಿ ಕಂಗನಾ ರನೌತ್ ವಿರುದ್ಧ “ಆಕ್ಷೇಪಾರ್ಹ” ಮತ್ತು “ಅಗೌರವದ” ಹೇಳಿಕೆಗಳನ್ನು ನೀಡಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮಾರ್ಚ್ 27 ರಂದು ಇಬ್ಬರಿಗೂ ಶೋಕಾಸ್ ನೋಟಿಸ್‌ ನೀಡಿತ್ತು.

ಇದನ್ನೂ ಓದಿ: Lok Sabha polls: ಗೆಲುವಿನ ಸರದಾರನಿಗೆ ಲೋಕಸಭೆ ಪ್ರವೇಶ ಸಾಧ್ಯವಾಗಲೇ ಇಲ್ಲ

Advertisement

Udayavani is now on Telegram. Click here to join our channel and stay updated with the latest news.

Next