Advertisement

ಅ.16ಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ಮತ್ತೆ ಡಿ.ಕೆ.ಶಿವಕುಮಾರ್ ಸ್ಪರ್ಧೆ?

03:08 PM Sep 12, 2022 | Team Udayavani |

ರಾಯಚೂರು: ಬೆಂಗಳೂರಿನ ಡಾ.ಅಂಬೇಡ್ಕರ್ ಭವನದಲ್ಲಿ ಅ.16ರ ಮಧ್ಯಾಹ್ನ 3 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಅಧ್ಯಕ್ಷನಾಗಿ ಎರಡು ವರ್ಷ ಮುಗಿದಿದೆ. ಮತ್ತೊಮ್ಮೆ ಸ್ಪರ್ಧಿಸಬೇಕೆ ಎನ್ನುವ ಬಗ್ಗೆ ನಿರ್ಧರಿಸಿಲ್ಲ. ಪಕ್ಷದ ಮುಖಂಡರು ನಿರ್ಧರಿಸುತ್ತಾರೆ. ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಿರುವವರು ಭಾಗಿಯಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಅ.22, 23 ರಂದು ರಾಹುಲ್ ಗಾಂಧಿ ರಾಯಚೂರಿನಲ್ಲಿ ವಾಸ್ತವ್ಯ

ಬಿಜೆಪಿಯವರು ಕಾಂಗ್ರೆಸ್ ನವರ ಹಗರಣ ಬಯಲಿಗೆ ಎಳೆಯುತ್ತೇವೆ ಎನ್ನುತ್ತಾರೆ. ಮೂರು ವರ್ಷದಿಂದ ಮಾಡದವರು ಈಗ ಮಾಡುತ್ತಾರಾ?  ಮತ್ತೇಕೆ ತಡ ಮಾಡುತ್ತಿದ್ದಾರೆ, ಕೂಡಲೇ ತನಿಖೆ ಆರಂಭಿಸಲಿ. ಶೇ.40 ಕಮಿಷನ್ ಪಡೆದವರು, ಕೋವಿಡ್ ವೇಳೆ ಅಕ್ರಮ ಮಾಡಿದವರು ಬಿಜೆಪಿಯವರು. ಅವರ ಗೊಡ್ಡು ಬೆದರಿಕೆಗಳಿಗೆ ಇಲ್ಲಿ ಯಾರು ಹೆದರುವುದಿಲ್ಲ ಎಂದು ಕಿಡಿ ಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next