Advertisement

ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ: ಅ.28ರಂದು ಚುನಾವಣೆ

03:13 PM Sep 29, 2020 | keerthan |

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.

Advertisement

ವಿಧಾನಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.

ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಕಳೆದ ಜೂನ್‌ 30 ಕ್ಕೆ ಚೌಡರೆಡ್ಡಿ ತೂಪಲ್ಲಿ, ಎಸ್‌.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡಿತ್ತು. ಈ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಚುನಾವಣಾ ಪರ್ವ: ಆರ್ ಆರ್ ನಗರ, ಶಿರಾ ಉಪಚುನಾವಣೆಗೆ ದಿನ ನಿಗದಿ

ಅಕ್ಟೋಬರ್ 1 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಅ.8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಅ.9, ನಾಮಪತ್ರ ಹಿಂದಕ್ಕೆ ಪಡೆಯಲು ಅ.12ರಂದು ಕೊನೆಯ ದಿನವಾಗಿದೆ. ನವೆಂಬರ್ 2 ರಂದು ಫಲಿತಾಂಶ ಪ್ರಕಟವಾಗಲಿದೆ.

Advertisement

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Advertisement

Udayavani is now on Telegram. Click here to join our channel and stay updated with the latest news.

Next