Advertisement

Udupi; 10 ದಿನದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಪೂರ್ಣ: ತಂಗಡಗಿ

11:36 PM Jan 23, 2024 | Team Udayavani |

ಉಡುಪಿ: ವಾರ ಅಥವಾ 10 ದಿನದೊಳಗೆ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೊಂಕಣಿ, ಬ್ಯಾರಿ, ಯಕ್ಷಗಾನ, ತುಳು, ಅರೆಭಾಷೆ ಅಕಾಡೆಮಿಗಳಿಗೂ ಅವಿಭಜಿತ ದ.ಕ. ಜಿಲ್ಲೆಗೂ ಸಂಬಂಧ ಹೆಚ್ಚಿದೆ. ಕಳೆದ ಚುನಾವಣೆಯಲ್ಲಿ ಪರಭಾವ ಗೊಂಡ ಪಕ್ಷದ ಅಭ್ಯರ್ಥಿಗಳು ಹಾಗೂ ಸ್ಥಳೀಯ ಮುಖಂಡರ ಸಲಹೆ ಪಡೆದು ಅಧ್ಯಕ್ಷರ ನೇಮಕ ಮಾಡಲಾಗುವುದು. ಕಾಂಗ್ರೆಸ್‌ ಕಟ್ಟಾಳು, ಪಕ್ಷದ ಬಾವುಟ ಹಿಡಿದು ದುಡಿದವರಿಗೆ ಅಕಾಡೆಮಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ, ಹೈಕಮಾಂಡ್‌ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಶಾಸ್ತ್ರೀಯ ಸ್ಥಾನಮಾನ ವಿಚಾರವಾಗಿ ರಾಜ್ಯದ ಎಲ್ಲ ಸಂಸದ ರಿಗೂ ಪ್ರಶ್ನೆ ಮಾಡುತ್ತೇನೆ. ಹೆಚ್ಚಿನ ಅನುದಾನ ಬರುವ ಸಲುವಾ ಗಿಯೇ ಶಾಸ್ತ್ರೀಯ ಸ್ಥಾನಮಾನ ನೀಡಲಾಗುತ್ತದೆ. ಬೇರೆ ರಾಜ್ಯಗಳಲ್ಲಿ ಇದರ ಲಾಭ ಪಡೆಯಲಾಗಿದೆ. ಆದರೆ ನಮ್ಮ ರಾಜ್ಯದ ಪರವಾಗಿ ಸಂಸದರು ಪ್ರಧಾನಿ ಮೋದಿ ಅವರಿಗೆ ಒಂದು ಪತ್ರ ಬರೆದಿಲ್ಲ. ಈ ತಿಂಗಳ ಅಂತಕ್ಕೆ ದಿಲ್ಲಿಗೆ ಹೋಗಿ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಲಿದ್ದೇನೆ. ರಾಜ್ಯದ ಬಿಜೆಪಿ ಸಂಸದರಿಗೆ ಮೋದಿ ಅವರನ್ನು ನೋಡಿದರೆ ಹೆದರಿಕೆಯಾಗುತ್ತದೆ. ಇನ್ನು ಅನುದಾನ ಕೇಳ್ಳೋದು ಎಲ್ಲಿಂದ ಬಂತು? ಇವರ್ಯಾರಿಗೂ ಮೋದಿ ಮಾತನಾಡಲು ಸಿಗುವುದೇ ಇಲ್ಲ. ಸಂಸದರು ಮಾಧ್ಯಮದ ಮುಂದೆ ಮಾತ್ರ ಮಾತನಾಡುತ್ತಾರೆ ಎಂದು ವಾಗ್ಧಾಳಿ ನಡೆಸಿದರು.

ಚುನಾವಣೆ ಬಂದಾಗ ಬಿಜೆಪಿಗೆ ಧರ್ಮದ ನೆನಪು
ಅಯೋಧ್ಯೆ ವಿಚಾರದಲ್ಲಿ ನಾವು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರು. ಬಿಜೆಪಿ ರಾಮನನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ. ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಎಷ್ಟು ರೈತರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದಾರೆ? ಎಷ್ಟು ಉದ್ಯೋಗ ಕೊಟ್ಟಿದ್ದಾರೆ? ಬಿಜೆಪಿಗೆ ಚುನಾವಣೆ ಬಂದಾಗ ಧರ್ಮ, ಮಸೀದಿ, ಪಾಕಿಸ್ಥಾನ ನೆನಪಾಗುತ್ತದೆ. ಮತ್ತೂಬ್ಬರ ಹೆಗಲಲ್ಲಿ ಬಂದೂಕು ಇಟ್ಟು ಬಿಜೆಪಿ ದೇಶ ಆಳಿದೆ. ಕರ್ನಾಟಕದಲ್ಲಿ ಆದ ಪರಿಸ್ಥಿತಿಯೇ ದೇಶದಲ್ಲೂ ಬಿಜೆಪಿಗೆ ಬರಲಿದೆ ಎಂದು ಸಚಿವ ತಂಗಡಗಿ ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next