Advertisement

ಹಾವೇರಿ: ಕಾಂಗ್ರೆಸ್ ಅಭ್ಯರ್ಥಿ ಹೋಟೆಲ್ ಮೇಲೆ ಚುನಾವಣಾ ಅಧಿಕಾರಿ ದಾಳಿ

12:16 AM May 09, 2023 | Team Udayavani |

ಹಾವೇರಿ: ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಮಾಲೀಕತ್ವದ ಹೋಟೆಲ್ ಮೇಲೆ ಸೋಮವಾರ ರಾತ್ರಿ ಚುನಾವಣೆ ಅಧಿಕಾರಿಗಳಿಂದ (ಫ್ಲೈಯಿಂಗ್ ಸ್ಕ್ವಾಡ್) ದಾಳಿ ನಡೆದಿದೆ.

Advertisement

ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್ ನಾಕಾ ಬಳಿ ಇರುವ ಎನ್ ಎಚ್-4 ಗ್ರ್ಯಾಂಡ್ ಹೋಟೆಲ್ ಮೇಲೆ ದಾಳಿ ನಡೆದಿದೆ.

ಮತದಾರರಿಗೆ ಹಂಚಲು ಕವರ್ ಗಳಲ್ಲಿ ಇಟ್ಟಿದ್ದ ಸುಮಾರು 6 ಲಕ್ಷ ನಗದನ್ನು ಜಪ್ತಿ ಮಾಡಲಾಗಿದೆ. ತಲಾ ಕವರ್ ನಲ್ಲಿ 3 ಸಾವಿರ ನಗದು ಇತ್ತು ಎನ್ನಲಾಗಿದೆ.

ಹಣ ಜಪ್ತಿ ಮಾಡಿದ ಚುನಾವಣಾ ಅಧಿಕಾರಿಗಳು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ತೆರಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿದ್ದ ಯಾಸಿರ್ ಖಾನ್ ಪಠಾಣ್ ಒಡೆತನದ ಹೋಟೆಲ್ ಮೇಲೆ ಚುನಾವಣೆ ಸಂದರ್ಭ ದಾಳಿ ನಡೆದಿರುವುದಕ್ಕೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next