Advertisement

ಚುನಾವಣೆ ಸಿದ್ಧತೆ: ಕ್ಷೇತ್ರವಾರು ಸಭೆ

07:00 AM Jul 15, 2018 | |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅಧಿಕಾರ ವಹಿಸಿಕೊಂಡ ತಕ್ಷಣವೇ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕೆಲಸಕ್ಕೆ ಮುಂದಾಗಿದ್ದು, ಲೋಕಸಭಾ ಕ್ಷೇತ್ರವಾರು ಸಭೆ ಆರಂಭಿಸಿದ್ದಾರೆ.

Advertisement

ಶನಿವಾರ ಬೆಂ.ಉತ್ತರ, ದಕ್ಷಿಣ, ಕೇಂದ್ರ, ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಪದಾಧಿಕಾರಿಗಳ ಜತೆ ಸಭೆ ನಡೆಸಿ ಕಾರ್ಯತಂತ್ರಗಳ ಬಗ್ಗೆ  ಸಮಾಲೋಚಿಸಿದರು.

ಜು.16ರಂದು ಮಂಡ್ಯ, ಮೈಸೂರು, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು,ಬಳ್ಳಾರಿ, ಕಾರವಾರ ಲೋಕಸಭೆ ಕ್ಷೇತ್ರದ ಪದಾಧಿಕಾರಿಗಳೊಂದಿಗೆ ಸಭೆ ನಡೆಯಲಿದ್ದು,17ಕ್ಕೆ ತುಮಕೂರು, ಚಿತ್ರದುರ್ಗ, ದಾವಣಗೆರೆ,ಶಿವಮೊಗ್ಗ, ಹಾಸನ ಹಾಗೂ ರಾಮನಗರ, ಜು.18ಕ್ಕೆ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ದಕ್ಷಿಣ ಕನ್ನಡ ಹಾಗೂ ವಿಜಯಪುರ, ಜು. 19ಕ್ಕೆ  ಬೆಳಗಾವಿ,
ಚಿಕ್ಕೋಡಿ, ಗದಗ, ಹಾವೇರಿ, ಹುಬ್ಬಳ್ಳಿ- ಧಾರವಾಡ, ಬಾಗಲ ಕೋಟೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಲಿದ್ದಾರೆ.

21ರಂದು ಕೆಪಿಸಿಸಿ ಪದಾಧಿಕಾರಿಗಳು,ಜಿಲ್ಲಾಧ್ಯಕ್ಷರೊಂದಿಗೆ ಸಭೆ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕುರಿತು ಪ್ರತ್ಯೇಕ ಸಭೆ ಸಹ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next