Advertisement

ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

09:23 AM Apr 23, 2019 | Team Udayavani |

ಸುರಪುರ: ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಶಿಕ್ಷಕ ಶಿವಪುತ್ರಪ್ಪ ಸಂಗಪ್ಪ ಕೂಡ್ಲಿ (50) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆ ಅಳಂದ ತಾಲೂಕಿನವರಾದ ಶಿವಪುತ್ರಪ್ಪ, ಶಹಾಪುರ ತಾಲೂಕು ಹಳಿಸಗರ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

Advertisement

ತಾಲೂಕಿನ ಮುಷ್ಠಳ್ಳಿ ಗ್ರಾಮದ 170ನೇ ಮತಗಟ್ಟೆಗೆ ಪೋಲಿಂಗ್‌ ಆಫೀಸರ್‌ ಆಗಿ ನಿಯೋಜಿಸಲಾಗಿತ್ತು. ಇಲ್ಲಿಯ ಶ್ರೀ ಪ್ರಭು ಕಾಲೇಜಿನಲ್ಲಿ ಸೋಮವಾರ ಕರ್ತವ್ಯಕ್ಕೆ ವರದಿ ಮಾಡಿಕೊಂಡ ನಂತರ ಮಸ್ಟರಿಂಗ್‌ ಕಾರ್ಯದಲ್ಲಿ ನಿರತವಾಗಿದ್ದ ವೇಳೆ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದರು. ತಕ್ಷಣ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next