Advertisement
ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪುರ್ವ ಕಾಲೇಜಿನಲ್ಲಿರುವ ಮಸ್ಟರಿಂಗ್- ಡಿಮ ಸ್ಪರಿಂಗ್ ಕೇಂದ್ರದಲ್ಲಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಆಯೋಗ ಉಪಹಾರ ಮತ್ತು ಕುಡಿಯುವ ನೀರು ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಆಕ್ರೋಶಗೊಂಡು, ಪ್ರತಿಭಟನೆ ನಡೆಸಿದರು. ಚುನಾವಣೆಗೆ ನಿಯೋಜನೆಗೊಂಡಿರುವ ವಿವಿಧ ತಾಲೂಕುಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಬೇರೆ ಸ್ಥಳಗಳಿಗೆ ತೆರಳಲು ಚುನಾವಣಾ ಇಲಾಖೆಯ ಆದೇಶದಂತೆ ಬೆಳಗ್ಗೆ 6 ಗಂಟೆಗೆ ಆಗಮಿಸಿದ್ದರು. ಆದರೆ, ಸಿಬ್ಬಂದಿಗೆ ಸಮರ್ಪಕವಾಗಿ ಬೆಳಗಿನ ಉಪಾಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿರಲಿಲ್ಲ. ಇದೇ ವೇಳೆ, ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿನ ಮಸ್ಟರಿಂಗ್ ಕೇಂದ್ರದಲ್ಲಿಯೂ ಅವ್ಯವಸ್ಥೆಯ ವಿರುದ್ಧ ಚುನಾವಣಾ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದರು.
Advertisement
ಮೂಲಸೌಕರ್ಯಕ್ಕೆ ಆಗ್ರಹಿಸಿ ಚುನಾವಣಾ ಸಿಬ್ಬಂದಿ ಪ್ರತಿಭಟನೆ
06:00 AM May 12, 2018 | |
Advertisement
Udayavani is now on Telegram. Click here to join our channel and stay updated with the latest news.