Advertisement

Election Update: BSY-B.L ಸಂತೋಷ್‌ ಭೇಟಿ

10:47 PM Apr 25, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚುತ್ತಿರುವ ಸಂದರ್ಭದಲ್ಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

Advertisement

ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ಸಂತೋಷ್‌ 15 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕುವುದಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆದಿದೆ ಎನ್ನಲಾಗಿದೆ. ಜತೆಗೆ ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಬಗ್ಗೆ ಇಬ್ಬರು ಮಾತುಕತೆ ನಡೆಸಿದ್ದಾರೆ.

ವರುಣಾ ಜಿದ್ದಾಜಿದ್ದಿ ಹಿನ್ನೆಲೆಯಲ್ಲಿ ಈಗಾಗಲೇ ಸಂತೋಷ್‌ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಂತೋಷ್‌ ಈ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ವರುಣಾದಲ್ಲಿ ಪ್ರಚಾರ ನಡೆಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಜಿದ್ದಾಜಿದ್ದಿ ಇರುವ ಕ್ಷೇತ್ರ ಗಳ ಪಟ್ಟಿ ಯನ್ನು ಯಡಿಯೂರಪ್ಪ ಅವರಿಗೆ ಕೊಟ್ಟು, ಅಲ್ಲಿ ಪ್ರಚಾರ ಹಾಗೂ ಗೆಲ್ಲುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ ಪ್ರಸ್ತುತ ರಾಜಕಾರಣದ ಬಗ್ಗೆ ಚರ್ಚಿಸಲಾಗಿದೆ. ವಾತಾವರಣ ಹೇಗಿದೆ ಅನ್ನೋದ್ರ ಬಗ್ಗೆ ಚರ್ಚೆ ನಡೆಸಿದರು.ಹಿರಿಯರಾಗಿ ಸಲಹೆ ನೀಡಿದರು.ಯಾರ ಬೆಂಬಲ ಇಲ್ಲದೇ ನಾವೇ ಸ್ವಂತ ಬಲದಲ್ಲೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next