Advertisement

Election Update: ಶೆಟ್ಟರ್‌ ಪಕ್ಷ ಬಿಟ್ಟ ಬೆನ್ನಲ್ಲೇ ಜೋಶಿ ಆಂತರಿಕ ಸಭೆ

09:38 PM Apr 16, 2023 | Team Udayavani |

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಬಿಜೆಪಿ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರೊಂದಿಗೆ ಭಾನುವಾರ ಆಂತರಿಕ ಸಭೆ ನಡೆದಿದ್ದು, ಡ್ಯಾಮೇಜ್‌ ಕಂಟ್ರೋಲ್‌ಗೆ ನಾಯಕರು ಮುಂದಾಗಿದ್ದಾರೆ. ಜಗದೀಶ ಶೆಟ್ಟರ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆದಿದೆ. ಅಮಿತ್‌ ಶಾ ಸೇರಿದಂತೆ ಹಲವಾರು ನಾಯಕರು ಶೆಟ್ಟರ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಒಂದು ವೇಳೆ ಪ್ರಯತ್ನಗಳು ಫಲ ನೀಡದೆ ಹೋದಲ್ಲಿ ಪಕ್ಷ ಯಾರಿಗೆ ಟಿಕೆಟ್‌ ಕೊಟ್ಟರೂ ಅವರ ಪರ ಕೆಲಸ ಮಾಡಬೇಕೆಂಬ ಸಂದೇಶ ನೀಡಲಾಗಿದೆ.

Advertisement

ಅಲ್ಲದೆ ಮಹಾನಗರ ಪಾಲಿಕೆಯ ಪಕ್ಷದ ಸದಸ್ಯರೊಂದಿಗೂ ಪ್ರತ್ಯೇಕ ಸಭೆ ನಡೆಸಿ ಖಡಕ್‌ ಸೂಚನೆ ನೀಡಲಾಗಿದೆ. ವ್ಯಕ್ತಿಗೆ ಮಾನ್ಯತೆ ನೀಡದೆ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ತಾಕೀತು ಮಾಡಿದ್ದಾಗಿ ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next