Advertisement

ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ 17ಕ್ಕೆ ಚುನಾವಣೆ

11:22 PM Feb 10, 2020 | Lakshmi GovindaRaj |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ಫೆ.17 ರಂದು ಚುನಾವಣೆ ನಡೆಯುವುದು ಖಚಿತವಾಗಿದೆ. ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ ಯಾರೊಬ್ಬರೂ ನಾಮಪತ್ರ ವಾಪಸ್‌ ಪಡೆಯದ ಕಾರಣ ಚುನಾವಣೆ ನಡೆಯಲಿದೆ.

Advertisement

ಬಿಜೆಪಿಯಿಂದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಾಂಗ್ರೆಸ್‌-ಜೆಡಿಎಸ್‌ ಬೆಂಬಲಿತ ಎಂದು ಹೇಳಿಕೊಂಡಿರುವ ಪಕ್ಷೇತರ ಅಭ್ಯರ್ಥಿ ಅನಿಲ್‌ಕುಮಾರ್‌ ಕಣದಲ್ಲಿದ್ದಾರೆ. ರಾಜ್ಯ ವಿಧಾನಸಭೆಯ ಸಂಖ್ಯಾಬಲ 222 ಇದ್ದು ಗೆಲುವಿಗೆ 112 ಮತಗಳು ಅಗತ್ಯವಾಗಿವೆ.

ಬಿಜೆಪಿ 117 ಸಂಖ್ಯಾಬಲ ಹೊಂದಿದ್ದು ಕಾಂಗ್ರೆಸ್‌-ಜೆಡಿಎಸ್‌105 ಸಂಖ್ಯಾಬಲ ಹೊಂದಿದೆ. ಬಿಜೆಪಿಯ ಲಕ್ಷ್ಮಣ ಸವದಿ ಅವಿರೋಧ ಆಯ್ಕೆಯಾಗುವ ವಿಶ್ವಾಸದಲ್ಲಿದ್ದರು. ಆದರೆ, ಅನಿಲ್‌ಕುಮಾರ್‌ ದಿಢೀರ್‌ ನಾಮಪತ್ರ ಸಲ್ಲಿಸಿದ್ದರಿಂದ ಇದೀಗ ಚುನಾವಣೆ ನಡೆಯುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next