Advertisement

ರಾಜ್ಯ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ಸಾಧ್ಯತೆ

06:45 AM Jan 13, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ  ನಡೆಸುವುದು ಸೂಕ್ತ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಚುನಾವಣಾ ಆಯೋಗ ಅಭಿಪ್ರಾಯ ಸಲ್ಲಿಸಿದೆ.

Advertisement

ರಾಜ್ಯದ 224 ಕ್ಷೇತ್ರಗಳಲ್ಲೂ ಒಂದೇ ಹಂತದಲ್ಲಿ ಒಂದೇ ದಿನ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಮರ್ಥವಾಗಿದೆ. ಅದಕ್ಕೆ ಬೇಕಾದ ಎಲ್ಲ ಅಗತ್ಯ ವ್ಯವಸ್ಥೆಯೂ ಇದೆ ಎಂದು ತಿಳಿಸಿದೆ ಎನ್ನಲಾಗಿದೆ.

ಕಾನೂನು ಸುವ್ಯವಸ್ಥೆ ಪಾಲನೆ ದೃಷ್ಟಿಯಿಂದಲೂ ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ಸೂಕ್ತ. ಜತೆಗೆ ಒಂದು ಕ್ಷೇತ್ರದ ಮತದಾರರು ಮತ್ತೂಂದು ಕ್ಷೇತ್ರಕ್ಕೆ ಹೋಗಿ ಬೋಗಸ್‌ ಮತ ಹಾಕುವುದು ತಪ್ಪಲಿದೆ. ರಾಜಕೀಯ ಪಕ್ಷಗಳು ಸಹ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಒಲವು ವ್ಯಕ್ತಪಡಿಸಿವೆ ಎಂದು ಹೇಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌, ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ಒಳ್ಳೆಯದು. ನಾವು ಅದಕ್ಕೆ ಸಮರ್ಥರಿದ್ದೇವೆ, ನಮಗೆ ಸಾಮರ್ಥ್ಯವೂ ಇದೆ. ರಾಜಕೀಯ ಪಕ್ಷಗಳು ಎರಡು ಹಂತಗಳಲ್ಲಿ ಚುನಾವಣೆ ನಡೆಸಬೇಕು ಎಂದು ಮನವಿ ಸಲ್ಲಿಸಿಲ್ಲ. ಅಂತಿಮ ತೀರ್ಮಾನ ಕೇಂದ್ರ ಚುನಾವಣಾ ಆಯೋಗ ಕೈಗೊಳ್ಳುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next