Advertisement

ಅವಧಿಗೆ ಮುನ್ನ ಚುನಾವಣೆ ನಡೆಯದು: ಪಾಟೀಲ

01:10 PM Jul 26, 2017 | Team Udayavani |

ಮುದಗಲ್ಲ: ಜಾತಿ-ಜಾತಿಗಳ ಮಧ್ಯೆ ರಾಜಕಾರಣ ಮಾಡದೇ ಜನಪರ ಯೋಜನೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ಕಾಂಗ್ರೆಸ್‌ ಸರಕಾರ ನೀಡಿದೆ ಎಂದು ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಸ್‌.ಅರ್‌. ಪಾಟೀಲ ಹೇಳಿದರು.

Advertisement

ಮಂಗಳವಾರ ಮುದಗಲ್ಲ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚುನಾವಣೆ ಪ್ರಚಾರಕ್ಕೆ ಆಗಮಿಸಿ ಭಾಷಣ ಮಾಡುವಾಗ ವಿಜಯೋತ್ಸವಕ್ಕೆ ಬಂದಿದ್ದೇವೆ ಎಂದು ಹೇಳಿದ್ದರು. ಆದರೆ ಉಪ ಚುನಾವಣೆಯಲ್ಲಿ ಅವರು ಸೋತಿರುವುದು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ 5 ವರ್ಷ ಅವಧಿ ಪೂರ್ಣಗೊಳಿಸಿದ ನಂತರ ಚುನಾವಣೆ ನಡೆಯಲಿದೆ. ಅವಧಿಗೆ ಮುನ್ನ ಚುನಾವಣೆ ನಡೆಯಲಿದೆ ಎಂಬುದೆಲ್ಲ ಕೇವಲ ಊಹಾಪೋಹ ಎಂದರು. 

ಪರಪ್ಪನ ಕಾರಾಗೃಹದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಇನ್ನಿತರ ವಿಷಯಗಳನ್ನು ಬಯಲು ಮಾಡಿದ ಐಜಿಪಿ ಡಿ. ರೂಪಾ ಅವರ ವರ್ಗಾವಣೆ ಎಷ್ಟರ ಮಟ್ಟಿಗೆ ಸೂಕ್ತ, ವಿರೋಧ ಪಕ್ಷಗಳು ನೇರವಾಗಿ ವರ್ಗಾವಣೆ ಕುರಿತು ಆರೋಪ ಮಾಡುತ್ತಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳಿಗೆ ಆಡಳಿತಾತ್ಮಕವಾಗಿ ವರ್ಗಾವಣೆ ಎನ್ನುವುದು ಸಾಮಾನ್ಯ. ಇದಕ್ಕೆ ವಿರೋಧ ಪಕ್ಷಗಳ ಆರೋಪ ಕೂಡ ಸಹಜ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅದ್ಯಕ್ಷ ದಾವೂದಸಾಬ, ಡಿ.ಎಸ್‌. ಹೂಲಗೇರಿ, ಪುರಸಭೆ ಸದಸ್ಯರು ಸೇರಿದಂತೆ ಕಾಂಗ್ರೆಸ್‌ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next