Advertisement

ಚುನಾವಣೆ ನೀತಿ ಸಂಹಿತೆ : ಸಹಕಾರ ಸಪ್ತಾಹ ಕಾರ್ಯಕ್ರಮ ಮುಂದಕ್ಕೆ

08:40 PM Nov 10, 2021 | Team Udayavani |

ಉಡುಪಿ: ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆ ಘೋಷಣೆಯ ಹಿನ್ನೆಲೆಯಲ್ಲಿ ನ.15ರಂದು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಬೇಕಿದ್ದ ರಾಜ್ಯ ಮಟ್ಟದ 68ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಸಹಕಾರಿ ಸಪ್ತಾಹದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿದ್ದೇವೆ. ನ.15ರಂದು ಕಾರ್ಯಕ್ರಮ ನಡೆಸಲು ಬೇಕಾದ ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದೆವು. ಜನವರಿ ತಿಂಗಳಲ್ಲಿ ಕಾರ್ಯಕ್ರಮ ನಡೆಸಲಿದ್ದೇವೆ. ಜ.17 ಮತ್ತು 18ರಂದು ಪರ್ಯಾಯ ಇರಲಿದೆ. ಈ ದಿನಾಂಕವನ್ನು ಗಮನದಲ್ಲಿಟ್ಟುಕೊಂಡು ಸಹಕಾರಿ ಸಪ್ತಾಹ ಕಾರ್ಯಕ್ರಮದ ದಿನಾಂಕವನ್ನು ಮರು ನಿಗದಿ ಮಾಡಲಿದ್ದೇವೆ ಮತ್ತು ಉಡುಪಿಯಲ್ಲಿಯೇ ಕಾರ್ಯಕ್ರಮ ನಡೆಸಲಿದ್ದೇವೆ ಎಂದರು.

ಇದನ್ನೂ ಓದಿ:ಪರಿಷತ್‌ ಚುನಾವಣೆಗೆ ಯಾವ ಪಕ್ಷದಿಂದಲೂ ಸ್ಪರ್ಧಿಸುವುದಿಲ್ಲ: ಡಾ| ರಾಜೇಂದ್ರ ಕುಮಾರ್‌

ದ.ಕ. ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಮತ್ತು ಉಡುಪಿ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಕುಂದಾಪುರ ಉಪ ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್‌.ಎನ್‌.ಅರುಣ್‌ ಕುಮಾರ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ‌ ದೇವಿಪ್ರಸಾದ್‌ ಶೆಟ್ಟಿ, ರಾಜೀವ್‌ ರಾವ್‌ ಪಾಂಗಳ, ರಾಜು ಪೂಜಾರಿ ಮೊದಲಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next