Advertisement

Pavagada: ರಾತ್ರಿ ಶೇಂಗಾ ಬೆಳೆ ಕಾವಲಿಗೆ ಹೋಗಿದ್ದ ಯುವಕರು ವಿದ್ಯುತ್ ಆಘಾತದಿಂದ ಮೃತ್ಯು

04:00 PM Aug 17, 2024 | Team Udayavani |

ಪಾವಗಡ: ತಾಲ್ಲೂಕಿನ ಟಿಎನ್ ಬೆಟ್ಟ ಬಳಿಯ ಜಮೀನಿನಲ್ಲಿ ಶೇಂಗಾ ಬೆಳೆ ಕಾವಲಿಗೆ ಹೋಗಿದ್ದ ಯವಕರಿಬ್ಬರು ವಿದ್ಯುತ್ ತಗುಲಿ ಶುಕ್ರವಾರ (ಆಗಸ್ಟ್ 16) ರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Advertisement

ಗ್ರಾಮದ ಅನಿಲ್(29), ಪುಟ್ಟರಾಜು(34) ಮೃತರು.

ಶುಕ್ರವಾರ ರಾತ್ರಿ ಶೇಂಗಾ ಬೆಳೆ ಕಾವಲಿಗಾಗಿ ಇಬ್ಬರೂ ಜಮೀನಿನ ಬಳಿ ಹೋಗಿದ್ದಾರೆ. ಕಾಡು ಹಂದಿ, ಕರಡಿಗಳು ಬಾರದಂತೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಪುಟ್ಟರಾಜು ಮೃತಪಟ್ಟಿದ್ದಾರೆ. ಪುಟ್ಟ ರಾಜು ಅವರನ್ನು ಕಾಪಾಡಲು ಟ್ರಾನ್ಸ್ ಫಾರ್ಮರ್ ಕಡೆ ಓಡಿ ಹೋಗುತ್ತಿದ್ದ ಅನಿಲ್ ಅವರಿಗೂ ತಂತಿ ತಗುಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.

ಶನಿವಾರ ಬೆಳಿಗ್ಗೆ ನರೇಗಾ ಯೋಜನೆಯಲ್ಲಿ ಕೆಲಸ ಮಾಡಲು ಹೋಗಿದ್ದ ಕೂಲಿ ಕಾರ್ಮಿಕರು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.

ಅರಸೀಕೆರೆ ಪೊಲೀಸರು, ಬೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.ಮಾಜಿ ಸಚಿವ ವೆಂಕಟರಮಣಪ್ಪ ಆಸ್ಪತ್ರೆಗೆ ಬೇಟೆ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

Advertisement

ಇದನ್ನೂ ಓದಿ: Neuschwanstein castle: ಜರ್ಮನಿಯ ಅಪೂರ್ಣ ಕೋಟೆ: “ನ್ಯೂ ಶ್ವಾನ್‌ ಸ್ಟೇನ್‌ ಕಾಸಲ್‌’

Advertisement

Udayavani is now on Telegram. Click here to join our channel and stay updated with the latest news.

Next