Advertisement

ವಿದ್ಯುತ್‌ ತಂತಿ ತುಳಿದು ನಾಲ್ವರ ದುರ್ಮರಣ

12:27 AM Apr 05, 2019 | Sriram |

ರಾಮದುರ್ಗ: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಎತ್ತಿನ ಚಕ್ಕಡಿಯಲ್ಲಿ ಹೊಲಕ್ಕೆ ಹೊರಟ ಒಂದೇ ಕುಟುಂಬದ ನಾಲ್ವರು ಸೇರಿ ಎರಡು ಎತ್ತುಗಳು ಸಾವಿಗೀಡಾದ ದುರ್ಘ‌ಟನೆ ಬುಧವಾರ ನಸುಕಿನಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ.

Advertisement

ರೈತ ರೇವಪ್ಪ ಕಲ್ಲೋಳ್ಳಿ (35), ಪತ್ನಿ ರತ್ನವ್ವ ರೇವಪ್ಪ ಕಲ್ಲೋಳ್ಳಿ(30), ಮಗ ಸಚಿನ ರೇವಪ್ಪ ಕಲ್ಲೋಳ್ಳಿ (8) ಹಾಗೂ ರೇವಪ್ಪನ ಸಹೋದರನ ಮಗ ಕೃಷ್ಣಾ ಶಿವಪ್ಪ ಕಲ್ಲೋಳ್ಳಿ (10) ಮೃತರು. ಚಕ್ಕಡಿಯಲ್ಲಿದ್ದ ಇಬ್ಬರು ಬಾಲಕಿಯರು ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ರೇವಪ್ಪನ ಪುತ್ರಿ ಲಕ್ಷ್ಮೀ ರೇವಪ್ಪ ಕಲ್ಲೋಳ್ಳಿ, ಅಣ್ಣನ ಪುತ್ರಿ ಪ್ರಿಯಾಂಕ ಶಿವಪ್ಪ ಕಲ್ಲೋಳ್ಳಿ ಬದುಕುಳಿದವರು. ಈ ಎಲ್ಲರೂ ಗ್ರಾಮದಲ್ಲಿ ಜಾತ್ರೆ ಇರುವುದರಿಂದ ಬಟ್ಟೆ ತೊಳೆಯಲೆಂದು ಗುರುವಾರ ನಸುಕಿನಲ್ಲಿ ಚಕ್ಕಡಿಯಲ್ಲಿ ಹೊಲಕ್ಕೆ ಹೊರಟಿದ್ದರು. ಸಂತೋಷ ಮುದಕಪ್ಪ ಮಸ್ಕಿ ಎಂಬುವರ ಹೊಲದಲ್ಲಿ ಹಾಯ್ದು ಹೋದ ವಿದ್ಯುತ್‌ ತಂತಿ ಎರಡು ದಿನದ ಹಿಂದೆ ತುಂಡಾಗಿ ಬಿದ್ದಿತ್ತು. ಈ ಬಗ್ಗೆ ಸಾರ್ವಜನಿಕರು ಹೆಸ್ಕಾಂಗೆ ದೂರು ನೀಡಿದ್ದರು ಎಂದು ಹೇಳಲಾಗಿದೆ.

ಆದರೆ ರೇವಪ್ಪ ಹೊಲದಲ್ಲಿ ಬಿದ್ದ ತಂತಿಯನ್ನು ಗಮನಿಸದೇ ಚಕ್ಕಡಿ ಮುಂದೆ ಹೊಡೆದಾಗ ತಂತಿ ಎತ್ತಿನ ಕಾಲಿಗೆ ತಾಗಿ ಅವಘಡ ಸಂಭವಿಸಿದೆ. ಅಪಾಯ ಅರಿತ ಇಬ್ಬರು ಬಾಲಕಿಯರು ಕೂಡಲೇ ಹಿಂದಿನಿಂದ ಜಿಗಿದು ಪಾರಾಗಿದ್ದಾರೆ. ಉಳಿದ ನಾಲ್ವರಿಗೆ ವಿದ್ಯುದಾಘಾತವಾಗಿ ನರಳಾಡುತ್ತಿದ್ದಾಗ ಇಬ್ಬರೂ ಓಡಿ ಮನೆಯವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಮನೆಯವರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಎಲ್ಲರೂ ಸಾವಿಗೀಡಾಗಿದ್ದರು.

ಸಿಬ್ಬಂದಿ ಅಮಾನತಿಗೆ ಶಿಫಾರಸು:ಘಟನೆಗೆ ಸಂಬಂ ಧಿಸಿದಂತೆ ಸಾಲಹಳ್ಳಿ ಪ್ರಭಾರಿ ಶಾಖಾಧಿ ಕಾರಿ ಈರಣ್ಣ ಆರ್‌. ನಾಯ್ಕರ ಹಾಗೂ ಪವರ್‌ಮನ್‌ ಬಸವರಾಜ ಕಟಕೋಳ ಎಂಬುವರ ಅಮಾನತಿಗೆ ಮೇಲಧಿ ಕಾರಿಗೆ ವರದಿ ನೀಡಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next