Advertisement

ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ರೈತ ಸಾವು

04:48 PM Aug 18, 2022 | Team Udayavani |

ಕುಣಿಗಲ್: ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ರೈತನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.

Advertisement

ಡಿ.ಹೊಸಹಳ್ಳಿ ಗೊಲ್ಲರಹಟ್ಟಿ ಗ್ರಾಮದ ವಾಸಿ ಶಿವಣ್ಣ (43) ಮೃತ ರೈತ.

ಎಂದಿನಿಂತೆ ಬೆಳಗ್ಗೆ ಶಿವಣ್ಣ ತನ್ನ ಮನೆ ಪಕ್ಕದಲ್ಲಿ ಇರುವ ತಮ್ಮ ಜಮೀನಿಗೆ ನೀರು ಹಾಯಿಸಲು, ಕೊಳವೆ ಬಾವಿಯ ಮೋಟರ್ ಆನ್ ಮಾಡಲು ಹೋದಾಗ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತು, ಇದನ್ನು ಸರಿಪಡಿಸಲು ಪಕ್ಕದಲ್ಲಿ ಇದ್ದ ವಿದ್ಯುತ್ ಪರಿವರ್ತಕ ಬಳಿ ಹೋದ ವೇಳೆ  ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಸಿದ್ದರಾಮಯ್ಯರಿಗೆ ಮಡಿಕೇರಿಯಲ್ಲೂ ಪ್ರತಿಭಟನೆಯ ಬಿಸಿ: ಕಾಂಗ್ರೆಸ್ ನಿಂದ ಪ್ರತಿರೋಧ 

ಘಟನೆ ಹುಲಿಯೂರುದುರ್ಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next