Advertisement

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

11:46 PM Apr 28, 2024 | Team Udayavani |

ಸುಬ್ರಹ್ಮಣ್ಯ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ನಿಂದ ಸಂಭವಿಸಿದ ಬೆಂಕಿ ಅನಾಹುತದಿಂದ ಗೇರು, ತೆಂಗು ತೋಟ ಸುಟ್ಟುಹೋದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯ ನೇರ್ಲ ಶಾಲೆಯ ತೋಟದಲ್ಲಿ ಶನಿವಾರ ಸಂಭವಿಸಿದೆ.

Advertisement

ಶಾಲೆಯ ತೋಟದ ಮೂಲಕ ಹಾದುಹೋಗಿದ್ದ ವಿದ್ಯುತ್‌ ಲೈನ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್ ನಿಂದಾಗಿ ಬೆಂಕಿ ಸಂಭವಿಸಿದ್ದು ಸುಮಾರು 25 ಗೇರುಬೀಜದ ಮರಗಳು, ನಾಲ್ಕು ತೆಂಗಿನ ಮರಗಳು ಬೆಂಕಿಗಾಹುತಿ ಯಾಗಿದೆ. ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next