Advertisement

ವಿದ್ಯುತ್ ಶಾರ್ಟ್‌ಸರ್ಕ್ಯೂಟ್; ಲೈನ್‌ಮ್ಯಾನ್ ಸಾವು

05:25 PM Mar 26, 2022 | Shwetha M |

ಸಾಗರ: ಉಪವಿಭಾಗ ವ್ಯಾಪ್ತಿಯ ಭದ್ರಾಪುರದ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು   ಶಾರ್ಟ್‌ಸರ್ಕ್ಯೂಟ್‌ನಿಂದ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

Advertisement

ರವಿ ಎಂಬಾತ ಮೃತ ಲೈನ್‌ಮ್ಯಾನ್. ಶನಿವಾರ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಉಪವಿಭಾಗೀಯ ಆಸ್ಪತ್ರೆಯಲ್ಲಿರುವ ರವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆ ಮಾತುಕತೆ ನಡೆಸಿದರು.

ಇದೇ ಸಂದರ್ಭದಲ್ಲಿ ಮುಂದೆ ಇಂತಹ ಅವಘಡ ನಡೆಯದಂತೆ ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ:ಬೆಂಗಳೂರು: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮಹಿಳೆ ಸಾವು

ಈ ಸಂದರ್ಭದಲ್ಲಿ ಮೆಸ್ಕಾಂನ ಕಾರ್ಯಪಾಲಕ ಅಭಿಯಂತರ ವೆಂಕಟೇಶ್, ನೌಕರರ ಸಂಘದ ಎಚ್.ಎಲ್.ಶ್ರೀಧರ್ ಇನ್ನಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next