Advertisement

Endo: ಎಂಡೋ ಸಂತ್ರಸ್ತರ ಮನೆಗಳಿಗೆ ವಿದ್ಯುತ್‌: ಹೈಕೋರ್ಟ್‌ ನಿರ್ದೇಶ

12:55 AM Oct 06, 2023 | Team Udayavani |

ಕಾಸರಗೋಡು: ಜಿಲ್ಲೆಯ ಎಂಡೋಸಲ್ಫಾನ್‌ ಸಂತ್ರಸ್ತರಿಗೆ ನಿರ್ಮಿಸಿರುವ ಮನೆಗಳಿಗೆ ಶೀಘ್ರ ವಿದ್ಯುತ್‌ ಸಂಪರ್ಕ ಒದಗಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ರಾಜ್ಯ ಹೈಕೋರ್ಟ್‌ ಕಾಸರಗೋಡು ಜಿಲ್ಲಾಧಿಕಾರಿಗೆ ನಿರ್ದೇಶ ನೀಡಿದೆ.

Advertisement

ಎಂಡೋ ಸಂತ್ರಸ್ತರ ಪುನರ್ವಸತಿಗಾಗಿ ನಿರ್ಮಿಸಿರುವ ಮನೆಗಳಿಗೆ ವಿದ್ಯುತ್‌ ಮತ್ತು ನೀರಿನ ಸಂಪರ್ಕ ನೀಡಿಲ್ಲವೆಂದು ಸತ್ಯಸಾಯಿ ಆರ್ಫನೇಜ್‌ ಟ್ರಸ್ಟ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದನ್ನು ಪರಿಶೀಲಿಸಿದ ಹೈಕೋರ್ಟ್‌ ನ್ಯಾಯಮೂರ್ತಿ ದೇವನ್‌ ರಾಮಚಂದ್ರನ್‌ ಈ ನಿರ್ದೇಶ ನೀಡಿದ್ದಾರೆ. ಮನೆಗಳನ್ನು ಫ‌ಲಾನುಭವಿಗಳಿಗೆ ಸಕಾಲದಲ್ಲಿ ಹಸ್ತಾಂತರಿಸದ ಕಾರಣ ಆ ಮನೆಗಳು ಈಗ ಬೀಳುವ ಸ್ಥಿತಿಯಲ್ಲಿವೆ. ಅವುಗಳ ನವೀಕರಣಕ್ಕೆ ಇನ್ನೂ 24 ಲಕ್ಷ ರೂ. ಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಗತ್ಯದ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ವಿನಂತಿಸಲಾಗಿತ್ತು.
ಈ ಮನೆಗಳನ್ನು ಶುಚೀಗೊಳಿಸಲು ಅಗತ್ಯ ಕ್ರಮ ಆರಂಭಿಸಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಅರ್ಜಿಯ ವಿಚಾರಣೆ ವàಳೆ ಜಿಲ್ಲಾಧಿಕಾರಿ ಆನ್‌ಲೈನ್‌ ಮೂಲಕ ಹಾಜರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next