Advertisement

Uppinangady ವಿದ್ಯುತ್‌ ಆಘಾತ: ಇಳಂತಿಲದ ವ್ಯಕ್ತಿ ಸಾವು

11:28 PM Jul 15, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಪೊಲೀಸ್‌ ಠಾಣ ವ್ಯಾಪ್ತಿಯ ಇಳಂತಿಲ ಗ್ರಾಮದ ಅಂತರ ಎಂಬಲ್ಲಿ ವಿದ್ಯುತ್‌ ಪರಿವರ್ತಕಕ್ಕೆ ಫ್ಯೂಸ್‌ ಅಳವಡಿಸಲು ಯತ್ನಿಸಿದ ವೇಳೆ ವಿದ್ಯುತ್‌ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ.

Advertisement

ಇಳಂತಿಲ ಗ್ರಾಮದ ಗೋಳಿತ್ತಡಿ ಮನೆ ನಿವಾಸಿ ತಿಮ್ಮಪ್ಪ ಗೌಡ ಅವರ ಪುತ್ರ ಹರೀಶ್‌ ಗೌಡ (35) ಮೃತರು. ಹರೀಶ್‌ ವಿವಾಹಿತರಾಗಿದ್ದು, ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಮೆಸ್ಕಾಂ ಇಲಾಖಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಹರೀಶ್‌ ಗೌಡ ವೃತ್ತಿಯಲ್ಲಿ ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next