Advertisement

ಸಸಿಹಿತ್ಲು: ಗಾಳಿ ಮಳೆಗೆ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

03:32 PM Aug 03, 2020 | keerthan |

ಸಸಿಹಿತ್ಲು: ಇಲ್ಲಿನ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಕೆರೆಯ ಬಳಿಯ ಖಾಸಗಿ ಜಮೀನಿನ ತೆಂಗಿನ ಮರವೊಂದು ಗಾಳಿ ಮಳೆಗೆ ಸಿಲುಕಿ ತುಂಡಾಗಿ ಬಿದ್ದು ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

Advertisement

ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ದೇವಳದ ಗೋಪಾಲ ಪಾತ್ರಿ ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ನಾರಾಯಣ ಕರ್ಕೇರ ಇವರು ಕೂಡಲೇ ಮುಕ್ಕ ಶಾಖೆಯ ಮೆಸ್ಕಾಂ ಇಲಾಖೆಗೆ ದೂರವಾಣಿ ಮೂಲಕ ದೂರು ನೀಡಿದ್ದರಿಂದ ಇಲಾಖೆಯ ಸಿಬ್ಬಂದಿಗಳು ಕೂಡಲೇ ಆಗಮಿಸಿ ತುರ್ತು ಕಾಮಗಾರಿಯನ್ನು ನಡೆಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next