Advertisement

ಮೂಡಿಗೆರೆ ಚಿಂದಿ ಆರಿಸಲು ಬಂದಿದ್ದವರ ಮೇಲೆ ಕಾಡಾನೆ ದಾಳಿ; ಸಣ್ಣಪುಟ್ಟ ಗಾಯಗಳಿಂದ ಪಾರು

11:01 AM Dec 26, 2022 | Team Udayavani |

ಮೂಡಿಗೆರೆ: ಟೆಂಟ್ ಹಾಕಿಕೊಂಡು ಮಲಗಿದವರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪಶು ಆಸ್ಪತ್ರೆ ಸಮೀಪ ನಡೆದಿದೆ.

Advertisement

ಹಾಸನ ಜಿಲ್ಲೆಯ ಹಗರೇ ಮೂಲದ ನಾಗವಲ್ಲಿ ಹಾಗೂ ಗಂಡುಗುಸೆ ಎಂಬುವರು ಚಿಂದಿ ಆರಿಸಲು ಬಂದಿದ್ದು ಮೂಡಿಗೆರೆ ತಾಲೂಕಿನ ಬಣಕಲ್ ಪಶು ಆಸ್ಪತ್ರೆ ಸಮೀಪ ಟೆಂಟ್ ಹಾಕಿಕೊಂಡು ಮಲಗಿದ್ದರು ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ನಾಗವಲ್ಲಿ ಎಂಬವರಿಗೆ ಸೊಂಟ ಹಾಗು ಎದೆ ಭಾಗಕ್ಕೆ ಪೆಟ್ಟಾಗಿದ್ದು ಗಂಡುಗುಸೆ ಎಂಬುವರಿಗೆ ಕಾಲಿಗೆ ಪೆಟ್ಟಾಗಿದೆ.

ಬಣಕಲ್ ನ ಸಾರ್ವಜನಿಕರು ಹಾಗೂ ಸಮಾಜಸೇವಕ ಆರಿಫ್ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗೆ ದಾಖಲಿಸಿದ್ದಾರೆ ಸ್ಥಳಕ್ಕೆ ಅರಣ್ಯ ರಕ್ಷಕ ಮೊಸಿನ್ ಉಪವಲಯ ಅಧಿಕಾರಿ ಉಮೇಶ್ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next