Advertisement
ತಾಲೂಕಿನ ಕೋಡಿಹಳ್ಳಿಯ ಪ್ಲಾಂಟೇಶನ್ ಅರಣ್ಯಇಲಾಖೆ ಅಧಿಕಾರಿಗಳ ವಸತಿಗೃಹಕ್ಕೆ ನೂರಾರು ರೈತರು ಬೀಗ ಜಡಿದು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಕೋಡಿಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 70 ಕಾಡಾನೆಗಳ ಹಿಂಡು ಕಳೆದ ಒಂದು ತಿಂಗಳಿನಿಂದ ಕಾಣಿಸಿಕೊಂಡಿದ್ದು, ರೈತರಜಮೀನುಗಳಿಗೆ ನುಗ್ಗಿ ದಾಂಧಲೆ ಮಾಡಿ ಬೆಳೆಯನ್ನೆಲ್ಲ ನಾಶ ಮಾಡುತ್ತಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕಿರಲಿಲ್ಲ. ನಿರಂತರ ಕಾಡಾನೆ ದಾಳಿಯಿಂದ ಬೇಸತ್ತ ರೈತರು, ಸೋಮವಾರ ತಾಳ್ಮೆ ಕಳೆದುಕೊಂಡಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿತ್ತು.
Related Articles
Advertisement
ಸೂಕ್ತ ಪರಿಹಾರ ನೀಡುತ್ತೇವೆ: ವಲಯ ಅರಣ್ಯ ಅಧಿಕಾರಿ ದಾಳೇಶ್ ಮಾತನಾಡಿ, ನಿಮ್ಮ ಸಮಸ್ಯೆ, ನಿಮ್ಮ ಕಷ್ಟ ನನಗೆ ಅರ್ಥವಾಗುತ್ತದೆ. ಆದರೆ, ಕಾಡುಪ್ರಾಣಿಗಳನ್ನು ನಾವು ಹೀಗೆ ಇರಬೇಕೆಂದು ಹೇಳಲು ಸಾಧ್ಯವಿಲ್ಲ. ಆದಷ್ಟು ಅವುಗಳನ್ನು ನಿಯಂತ್ರಿಸಿ ಕಾಡಿಗೆ ಓಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಕಾಡಾನೆಗಳನ್ನು ಶಾಶ್ವತವಾಗಿ ತಡೆಗಟ್ಟಲು ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ರೈಲ್ವೇ ಕಂಬಿಗಳನ್ನು ಅಳವಡಿಸುವ ಕೆಲಸ ಪ್ರಗತಿಯಲ್ಲಿದ್ದು, ಕೆಲವು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಕಾಡು ಪ್ರಾಣಿಗಳನ್ನು ಕಾಡಿಗೆ ಓಡಿಸುತ್ತೇವೆ. ಬೆಳೆ ನಾಶಕ್ಕೆ ಸೂಕ್ತ ಪರಿಹಾರವನ್ನು ತ್ವರಿತವಾಗಿ ಕೊಡಿಸಿ ಕೊಡಲಾಗುವುದು. ರೈತರು ತಮ್ಮ ತಾಳ್ಮೆಯನ್ನು ಕಳೆದುಕೊಳ್ಳಬಾರದೆಂದು ರೈತರನ್ನು ಮನವೂಲಿಸುವಲ್ಲಿ ಯಶಸ್ವಿಯಾದರು. ಬಳಿಕ ರೈತರು ಪ್ರತಿಭಟನೆ ಕೈಬಿಟ್ಟರು.