Advertisement

ಕಾಡಾನೆ ದಾಳಿ: ಬಹಿರ್ದೆಸೆಗೆ ತೆರಳಿದ್ದ ವೃದ್ಧೆ  ಬಲಿ

01:53 AM Jan 21, 2019 | |

ಸಂತೆಮರಹಳ್ಳಿ (ಚಾಮರಾಜನಗರ): ಸಮೀಪದ ಮಹಂತಾಳಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಗೆ ಸಿಲುಕಿ ವೃದ್ಧೆಯೊಬ್ಬಳು ಮೃತಪಟ್ಟಿದ್ದಾಳೆ. ಗ್ರಾಮದ ಶಿವಮ್ಮ (70) ಮೃತ ದುರ್ದೈವಿ. ಇವರು ಗ್ರಾಮದ ಹೊರವಲಯದಲ್ಲಿ ಬಹಿರ್ದೆಸೆಗೆ ತೆರಳಿದ್ದರು. ಆ ಸಮಯದಲ್ಲಿ ಅಲ್ಲೇ ಬೀಡು ಬಿಟ್ಟಿದ್ದ ಕಾಡಾನೆಗಳು ಏಕಾಏಕಿ ದಾಳಿ ನಡೆಸಿ, ತುಳಿದು ಸಾಯಿಸಿದವು. ಇದರಿಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟಿಸಿದರು.

Advertisement

ಗ್ರಾಮಕ್ಕೆ ಸಂಸದ ಆರ್‌ .ಧ್ರುವನಾರಾಯಣ ಭೇಟಿ ನೀಡಿ, ಮೃತ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿದರು. ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗಳ ನಿಧಿಯಿಂದಲೂ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್‌ ಭೇಟಿ ನೀಡಿ, ಅರಣ್ಯ ಇಲಾಖೆ ವತಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಹಾಗೂ ಇವರ ಕುಟುಂಬದ ಒಬ್ಬರಿಗೆ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆ ನೀಡಲಾಗುವುದು. ಆನೆಗಳನ್ನು ಕಾಡಿಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next