Advertisement

ಚಿಕ್ಕಮಗಳೂರು: ಆನೆ ಓಡಿಸಲು ಹೋದ ಸಿಬ್ಬಂದಿಯ ಮೇಲೆ ಆನೆ ದಾಳಿ!

02:06 PM May 07, 2021 | Team Udayavani |

ಚಿಕ್ಕಮಗಳೂರು: ತಾಲ್ಲೂಕಿನ ಆಲ್ದೂರು ಸಮೀಪದ ಕೆಳಗೂರು ವ್ಯಾಪ್ತಿಯ ಚಿತ್ತುವಳ್ಳಿ ಗ್ರಾಮದ ಬಳಿ ಕಾಡನೆ ಓಡಿಸಲು ಹೋದ ಅರಣ್ಯ ಇಲಾಖೆಯ ಸಿಬ್ಬಂದಿಯ ಮೇಲೆ ಆನೆ ದಾಳಿ ನಡೆಸಿದ್ದು, ಸಿಬ್ಬಂದಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

Advertisement

ಮೃತಪಟ್ಟ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಪುಟ್ಟರಾಜು ಎಂದು ಗುರುತಿಸಲಾಗಿದೆ.

ಆಲ್ದೂರು ಸಮೀಪದ ಚಿತ್ತುವಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಬೆಳಿಗ್ಗೆ ಕಾಡಾನೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ 8 ರಿಂದ 10 ಜನ ಸಿಬ್ಬಂದಿ ತಂಡ ಆನೆ ಓಡಿಸಲು ಪಟಾಕಿ ಸಿಡಿಸಿ ಓಡಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪುಟ್ಟರಾಜ ಕಾಲುಜಾರಿ ಕೆಳಗೆ ಬಿದ್ದಿದ್ದು, ಪುಟ್ಟರಾಜನ ಮೇಲೆ ಆನೆ ದಾಳಿ ಮಾಡಿದೆ.

ಇದನ್ನೂ ಓದಿ:ಜಮೀರ್ ಅಹಮದ್ ರಕ್ತದಲ್ಲೇ ಮುಸಲ್ಮಾನರ ಪರ, ಹಿಂದೂಗಳ ವಿರೋಧವಿದೆ: ಈಶ್ವರಪ್ಪ ವಾಗ್ದಾಳಿ

ತೀವ್ರ ಗಾಯಗೊಂಡ ಪುಟ್ಟರಾಜು ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಿ ಪುಟ್ಟರಾಜು ಮೃತಪಟ್ಟಿದ್ದಾರೆ.

Advertisement

ಪುಟ್ಟರಾಜ ಆಲ್ದೂರಿನ ಮೇಗೂರು ಗ್ರಾಮದವರಾಗಿದ್ದು, ಕಳೆದ 10-12ವರ್ಷಗಳಿಂದ ಮುತ್ತೋಡಿ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಬಡ್ತಿ ಹೊಂದಿ ಆಲ್ದೂರು ಅರಣ್ಯ ವ್ಯಾಪ್ತಿಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next