Advertisement

ಕೆಂಪುಹೊಳೆ: ಲಾರಿ ಚಾಲಕನ ಮೇಲೆ ಕಾಡಾನೆ ದಾಳಿ, ಚಾಲಕ ಸ್ಥಳದಲ್ಲೇ ಸಾವು!

12:14 PM Feb 26, 2021 | Team Udayavani |

ನೆಲ್ಯಾಡಿ: ಲಾರಿ ಚಾಲಕರೋರ್ವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿಯ ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ಗುರುವಾರ ರಾತ್ರಿ ನಡೆದಿದೆ.

Advertisement

ಮೃತ ಲಾರಿ ಚಾಲಕ ರಾಜಸ್ಥಾನ ಮೂಲದವನೆಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ವೇಳೆ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ವಿರಾಜಪೇಟೆ: ಕಾಡಾನೆ ತುಳಿತಕ್ಕೆ ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟ ಕಾರ್ಮಿಕ!

ಸಕಲೇಶಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮೃತದೇಹವನ್ನು ಸಕಲೇಶಪುರ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Advertisement

ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಗುದ್ದಿದ ಆನೆ: ವಿದ್ಯುತ್ ಪ್ರವಹಿಸಿ  ಸ್ಥಳದಲ್ಲೇ ಸಾವು

ಕೆಂಪುಹೊಳೆ ಪ್ರದೇಶದಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿದ್ದು ಇದರಿಂದಾಗಿ ವಾಹನ ಸಂಚಾರದಲ್ಲೂ ಅಡಚಣೆ ಉಂಟಾಗಿದ್ದು, ವಾಹನ ಸವಾರರು ಭಯಭೀತರಾಗಿ ವಾಹನ ಓಡಾಟ ನಡೆಸುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next