Advertisement

ಕಾಡಾನೆಗಳ ಕಾಟ: ಆತಂಕ..!

03:29 PM Dec 02, 2021 | Team Udayavani |

ಸಕಲೇಶಪುರ: ತಾಲೂಕಿನ ಬಾಗೆ ಅರಸುನಗರ ಸಮೀಪ ಕಾಡಾನೆಯೊಂದು ಬಂದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರು ಕಾಡಾನೆಯನ್ನು ನೋಡಲು ಮುಗಿಬಿದ್ದ ಘಟನೆ ಬುಧವಾರ ಸಂಜೆ ನಡೆದಿದೆ.

Advertisement

ತಾಲೂಕಿನ ಬೆಳ ಗೋಡು ಹೋಬಳಿ ಯಲ್ಲಿ ಕಾಡಾನೆಗಳ ಕಾಟ ಹೆಚ್ಚಾಗಿದ್ದು, ಕಾಡಾನೆಗಳು ಎಲ್ಲೆಂ ದರಲ್ಲಿ ಸಂಚರಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಂತೆ ಇರುವ ಬಾಗೆ ಅರಸುನಗರ ಸಮೀಪದ ಕಾಫಿ ತೋಟವೊಂದರಲ್ಲಿ ಕಾಡಾನೆ ಕಾಣಿಸಿಕೊಂಡಿದ್ದರಿಂದ ಜನರಲ್ಲಿ ಕೆಲ ಸಮಯ ಆತಂಕ ದೃಷ್ಟಿಸಿತ್ತು. ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವಾಹನ ಸವಾರರು ವಾಹನವನ್ನು ನಿಲ್ಲಿಸಿ, ಕಾಡಾನೆಯನ್ನು ನೋಡಲು ಮುಂದಾದರು.

ಒಟ್ಟಾರೆಯಾಗಿ ಬೆಳಗೋಡು ಹೋಬಳಿಯಲ್ಲಿ ಕಾಡಾನೆಗಳ ಕಾಟ ಹೆಚ್ಚಾಗಿದ್ದು, ಸರ್ಕಾರ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಗಳು ಸಂಭವಿಸುವುದರಲ್ಲಿ ಅನುಮಾನವಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next