Advertisement

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

06:26 PM Oct 11, 2024 | sudhir |

ತೀರ್ಥಹಳ್ಳಿ : ಕಾಡಾನೆ ದಾಳಿಯಿಂದ ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಭತ್ತಗಳನ್ನು ಸಂಪೂರ್ಣ ನಾಶ ಮಾಡಿದೆ.

ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಬೆಳೆದಂತಹ ಬೆಳೆ ನಾಶವಾಗಿರುವುದಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Advertisement

Udayavani is now on Telegram. Click here to join our channel and stay updated with the latest news.

Next