Advertisement

Belthangady ಚಿಬಿದ್ರೆಯಲ್ಲಿ ಆನೆ ಹಾವಳಿ; ಹಾನಿ

10:59 PM Dec 16, 2023 | Team Udayavani |

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದೊಂದು ವಾರದಿಂದ ಕಡಿಮೆಯಾಗಿದ್ದ ಕಾಡಾನೆ ಕಾಟ ಮತ್ತೆ ಆರಂಭವಾಗಿದೆ.

Advertisement

ಚಾರ್ಮಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮಾಕಳ ರಾಮಣ್ಣ ಗೌಡರ ತೋಟಕ್ಕೆ ಶುಕ್ರವಾರ ತಡರಾತ್ರಿ ದಾಳಿ ಇಟ್ಟ ಕಾಡಾನೆಗಳು 50 ಬಾಳೆ ಗಿಡ, ಎರಡು ತೆಂಗಿನ ಮರ, ಅಡಕೆ ಮರಗಳನ್ನು ಧ್ವಂಸಗೊಳಿಸಿವೆ. ಮಾತ್ರವಲ್ಲದೇ ಒಣಗಲು ಹಾಕಿದ ಅಡಕೆಗೆ ಆನೆಗಳು ತುಳಿದಿದ್ದು ನಷ್ಟ ಉಂಟಾಗಿದೆ.

ಈ ಗುಂಪಿನಲ್ಲಿ ಇರುವ ಮರಿಯಾನೆ ಕಳೆದ ನಾಲ್ಕು ವರ್ಷಗಳ ಹಿಂದೆ ಕಡಿರುದ್ಯಾವರದ ತೋಟವೊಂದರಲ್ಲಿ ಗುಂಪಿನಿಂದ ಬೇರ್ಪಟ್ಟು ಬಾಕಿಯಾಗಿದ್ದು, ಬಳಿಕ ಅದನ್ನು ಅರಣ್ಯ ಇಲಾಖೆ ಕಾಡಿಗೆ ಬಿಟ್ಟಿತ್ತು ಈಗ ಮರಿಯಾನೆ ಹೆಚ್ಚಿನ ಬೆಳವಣಿಗೆ ಹೊಂದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next