Advertisement

ದೇವರ ಮನೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಪಾರಾದ ಕಾರು

06:02 PM Apr 01, 2022 | Team Udayavani |

ಕೊಟ್ಟಿಗೆಹಾರ:ದೇವರಮನೆ ರಸ್ತೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಗುರುವಾರ ರಾತ್ರಿ ನಡೆದಿದೆ.

Advertisement

ಬಕ್ಕಿ ಗ್ರಾಮದ ಸುರೇಂದ್ರ ಅವರು ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದ ವೇಳೆ ರಸ್ತೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಈ ವೇಳೆ ಕಾರಿನ ಹೆಡ್‌ಲೈಟ್‌ ಆಫ್ ಮಾಡಿ ಕೆಲಕಾಲ ರಸ್ತೆಯಲ್ಲೆ ನಿಲ್ಲಿಸಿದ್ದಾರೆ. ಈ ವೇಳೆ ಕಾಡಾನೆ ಕಾರಿನ ಸಮೀಪಕ್ಕೆ ಬಂದು ಕೆಲ ಕಾಲ ನಿಂತು ಬಳಿಕ ಕಾಡಿನತ್ತ ಮುಖ ಮಾಡಿದೆ.

ದೇವರ ಮನೆ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಿದ್ದು ರಾತ್ರಿ ಸಮಯದಲ್ಲಿ ಸಂಚರಿಸಲು ಪ್ರಯಾಣಿಕರು ಭಯ ಪಡುವಂತಹ ವಾತಾವರಣವಿದೆ. ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next